ಬಂಟ್ವಾಳ

ಬೊಂಡಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂತನ ತರಗತಿ ಕೊಠಡಿಗಳ ಉದ್ಘಾಟನೆ

ಬೊಂಡಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂತನ ತರಗತಿ ಕೊಠಡಿಗಳ ಉದ್ಘಾಟನೆ ಶುಕ್ರವಾರ ನಡೆಯಿತು. ಪುತ್ತೂರು  ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್  ಮಾತನಾಡಿ, ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು ಎಂದರು.

ಜಾಹೀರಾತು

ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಮತ್ತು ಶಾಲಾಭಿವೃದ್ಧಿ ಸಮಿತಿ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘ ಸಂಸ್ಥೆ ದಾನಿಗಳ ಅನುದಾನದ ನೆರವಿನಿಂದ ನೂತನವಾಗಿ ಒಟ್ಟು ಮೂರು ತರಗತಿ ಕೊಠಡಿಗಳು ನಿರ್ಮಾಣವಾಗಿದ್ದು ಬಂಟ್ವಾಳ ಶಾಸಕ ರಾಜೇಶ್  ನಾಯ್ಕ್ ಒಂದು ತರಗತಿ  ಕೊಠಡಿ, ಎಂ ಆರ್ ಪಿ ಎಲ್ ನ ಪ್ರದೀಪ್ ಕುಮಾರ್ ಒಂದು ಕೊಠಡಿಯನ್ನು , ಬಂಟ್ವಾಳ  ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಒಂದು ಕೊಠಡಿಯನ್ನು ಉದ್ಘಾಟಿಸಿ ಶಾಲೆಗೆ ಹಸ್ತಾಂತರಿಸಿದರು.

ಮಂಗಳೂರು ಸಂಸದ ಕ್ಯಾ. ಬ್ರಿಜೇಶ್  ಚೌಟ ನಾಮ ಫಲಕ ಅನಾವರಣ ಮಾಡಿ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ  ಮೂರು ನಾಲ್ಕು ಗ್ರಾಮ ಒಟ್ಟು ಸೇರಿಸಿ ಒಂದು ಮಾದರಿ ಶಾಲೆ ನಿರ್ಮಾಣವಾಗುವ ಅಗತ್ಯವಿದೆ ಎಂದರು.

ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ವಹಿಸಿದ್ದರು.  ಈ ಸಂದರ್ಭದಲ್ಲಿ 1979ರಲ್ಲಿ ಬೊಂಡಾಲ ಸರಕಾರಿ ಶಾಲೆ ಸ್ಥಾಪನೆಗೆ ಶ್ರಮಿಸಿದ ಮಹನೀಯರನ್ನು ಗೌರವಿಸಲಾಯಿತು. ಕಟ್ಟಡ ನಿರ್ಮಿಸಿದ ಗುತ್ತಿಗೆದಾರ ಗೋಪಾಲ್ ನೆಲ್ಲಿ ಹಾಗೂ ಎಂ ಆರ್ ಪಿ ಎಲ್ ನ ಪ್ರದೀಪ್ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

ವಿಶೇಷವಾಗಿ ಸಹಕರಿಸಿದ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜನಾರ್ದನ ಕುಲಾಲ್, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಂಡಾಲ ವಿನೋದ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ರೇಖಾ  ಸಿ ಎಚ್ ಹಾಗೂ ಶಿಕ್ಷಕಿಯರರು, ಅಕ್ಷರ ದಾಸೋಹ ಸಿಬ್ಬಂದಿ, ನೃತ್ಯ ಶಿಕ್ಷಕ ಶ್ರೀಕಾಂತ್ ಕೊಂಡಾಣ, ಶಾಲೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರ ಸಮನ್ವಯ ಅಧಿಕಾರಿ ವಿದ್ಯಾಕುಮಾರಿ, ಬಂಟ್ವಾಳ ನಗರ ಕ್ಲಸ್ಟರ್ ಸಿ ಆರ್ ಪಿ ಸುಧಾಕರ್, ಪುರಸಭೆ ಸದಸ್ಯ ಜಯರಾಮ ಗುಂಡೂರ್, ಸತೀಶ್ ಶೆಟ್ಟಿ ಬೊಂಡಾಲ,  ಶಾಲಾ ನಾಯಕ ಹರಿಪ್ರಸಾದ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಮೊದಲು ಶಾಲಾ ಮಕ್ಕಳಿಂದ ತುಳುನಾಡ ವೈಭವ ನೃತ್ಯ ರೂಪಕ ಪ್ರದರ್ಶಿಸಲ್ಪಟ್ಟಿತು. ಶಾಲಾ ಮುಖ್ಯ ಶಿಕ್ಷಕಿ ರೇಖಾ ಸಿ ಎಚ್ ಸ್ವಾಗತಿಸಿದರು. ಶಿಕ್ಷಕಿ ಭವ್ಯ ವಂದಿಸಿದರು. ಶಿಕ್ಷಕಿ ಲಾವಣ್ಯ ಹಾಗೂ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕಿರಾದ ಕಿಶೋರಿ ಹಾಗೂ ಭವ್ಯ ಸಹಕರಿಸಿದರು

OPTIC WORLD

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.