ಕಲ್ಲಡ್ಕ

Kalladka: ಹದಗೆಟ್ಟಿದೆ ಕಲ್ಲಡ್ಕ ಸರ್ವೀಸ್ ರಸ್ತೆ, ವಾಹನ ಸವಾರರ ಗಮನಕ್ಕೆ

ಜಾಹೀರಾತು

ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಬಹುತೇಕ ಪೂರ್ಣಗೊಂಡು ವಾಹನಗಳ ಸರಾಗ ಸಾಗಾಟಕ್ಕೆ ಅವಕಾಶ ಸಿಕ್ಕಿದೆ. ಆದರೆ ಇನ್ನೂ ಕೂಡ ಕಲ್ಲಡ್ಕ ಹಾಗೂ ಮಾಣಿಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿಲ್ಲ. ಮಂದಗತಿಯ ಕಾಮಗಾರಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೇಲ್ಸೇತುವೆ ಆರಂಭ ಮತ್ತು ಅಂತ್ಯದ ಕಲ್ಲಡ್ಕ ಕೆ.ಸಿ.ರೋಡ್‌ನಿಂದ ನರಹರಿ ಪರ್ವತದವರೆಗೆ ಹಾಗೂ ಪೂರ್ಲಿಪ್ಪಾಡಿ ಭಾಗದಲ್ಲಿ ಇನ್ನೂ ಕೂಡ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸರಾಗ ಸಂಚಾರಕ್ಕೆ ಅವಕಾಶ ಸಿಕ್ಕಿಲ್ಲ.

ಕಾಮಗಾರಿಗಾಗಿ ಒಂದು ಬದಿಯಲ್ಲೇ ಎರಡೂ ಪಥದ ವಾಹನಗಳು ಸಾಗುವುದರಿಂದ ದೊಡ್ಡ ವಾಹನಗಳು ಎದುರು-ಬದುರಾದರೆ ಟ್ರಾಫಿಕ್ ಜಾಮ್ ಕಿರಿಕಿರಿ

ಬಸ್ಸುಗಳೂ ಒಮ್ಮೊಮ್ಮೆ ಬರುವುದಿಲ್ಲ:

ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಎರಡೂ ಭಾಗದ ವಾಹನಗಳು ಸಾಗುತ್ತಿರುವುದರಿಂದ ತೊಂದರೆ ಉಂಟಾಗುತ್ತಿದೆ. ಬಸ್ಸುಗಳೂ ಒಮ್ಮೊಮ್ಮೆ ಫ್ಲೈಓವರ್ ನಲ್ಲೇ ಹೋಗುತ್ತವೆ.  ಕಲ್ಲಡ್ಕ ಪೇಟೆಗೇ ಬರುವುದಿಲ್ಲ.

ಎರಡು ವಾರಗಳ ಕಾಲ ಮಳೆ ಬಿಡುವುದು ಪಡೆದುಕೊಂಡ ಸಂದರ್ಭದಲ್ಲೂ ಕಾಂಕ್ರೀಟ್ ಕಾಮಗಾರಿಗೆ ವೇಗ ಸಿಕ್ಕಿರಲಿಲ್ಲ. ಕೆಲವೊಂದು ಕಡೆ ಬೆಡ್ ಹಾಕಿರುವುದರಿಂದ ವಾಹನಗಳು ಹೊಂಡ ತುಂಬಿದ ರಸ್ತೆಯಲ್ಲಿ ಸಾಗುವುದು ತಪ್ಪಿದ್ದು, ಶೀಘ್ರ ಕಾಂಕ್ರೀಟ್ ಕಾಮಗಾರಿ ಮುಗಿಸಲು ಆಗ್ರಹ ಕೇಳಿ ಬರುತ್ತಿದೆ.

ನರಿಕೊಂಬಿಗೆ ಹೋಗಬೇಕಿದ್ರೆ, ಮೆಲ್ಕಾರ್ ಗೆ ಹೋಗಿ ಬರಬೇಕು!!!

ನರಿಕೊಂಬು ಕಡೆಗೆ ಹೋಗುವ ಸರ್ವೀಸ್ ರಸ್ತೆ ಕಾಂಕ್ರೀಟ್ ಹಾಕುವ ಕಾರ್ಯವಾಗಿದೆ. ಆದರೆ ಸಂಚಾರಕ್ಕೆ ತೆರೆದುಕೊಂಡಿಲ್ಲ. ಬಿ.ಸಿ.ರೋಡ್ ನಿಂದ ನರಿಕೊಂಬಿಗೆ ಬರಬೇಕು ಎಂದಾದರೆ, ನೇರವಾಗಿ ಫ್ಲೈಓವರ್ ನಲ್ಲಿ ಸಾಗಿ ಮೆಲ್ಕಾರ್ ಗೆ ಹೋಗಿ, ಅಲ್ಲಿ ಸರ್ವೀಸ್ ರಸ್ತೆಯಲ್ಲಿ ಹಿಂದಕ್ಕೆ ಬರಬೇಕು

ಇದು ವಾಹನ ಚಾಲಕರ ಗೊಂದಲಕ್ಕೆ ಕಾರಣವಾಗುತ್ತಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

10 hours ago