ಪ್ರಮುಖ ಸುದ್ದಿಗಳು

Dakshina Kannada news: ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು- ಬ್ಯಾಂಕ್‍ಗಳಿಗೆ ಸಂಸದರ ಸೂಚನೆ

ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.


ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (Pಒಈಒಇ) ಯೋಜನೆಯಡಿ ಒಂದು ದಿನದ ‘ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು


ವೈಯಕ್ತಿಕ ಉದ್ದಿಮೆ, ಗೃಹ ಉತ್ಪಾದನೆ ಉತ್ಪಾದನೆ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆ ಸೇರಿದಂತೆ ವಿವಿಧ ಕಿರು ಉದ್ಯಮಗಳಿಗೆ ನೆರವು ನೀಡಲು ಕೇಂದ್ರ ಸರಕಾರದ ಹಲವಾರು ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆದರೆ ಬ್ಯಾಂಕುಗಳು ಸಾಲ ಮಂಜೂರಾತಿಗೆ ಸತಾಯಿಸುತ್ತಿರುವ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಲೇ ಯೋಜನೆಯ ಮೂಲ ಉದ್ದೇಶವೇ ಈಡೇರುವುದಿಲ್ಲ. ಈ ನಿಟ್ಟಿನಲ್ಲಿ ಬ್ಯಾಂಕುಗಳಲ್ಲಿ ಕಿರು ಆಹಾರ ಸಂಸ್ಕರಣೆ ಘಟಕಗಳ ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ನಡೆಸಬೇಕು ಎಂದು ಸಂಸದರು ಸೂಚಿಸಿದರು.
ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದೇಶಾದ್ಯಂತ ಈ ಯೋಜನೆಯಡಿ 2 ಲಕ್ಷ ಸಣ್ಣ ಉದ್ಯಮಶೀಲರನ್ನು ಹಣಕಾಸು ಬೆಂಬಲ ನೀಡುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.
ಕೃಷಿ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಮಾತನಾಡಿ ಈ ಯೋಜನೆಯಡಿ ಗರಿಷ್ಠ 15 ಲಕ್ಷದ ಸಬ್ಸಿಡಿ ದೊರಕಲಿದೆ. ಕೇಂದ್ರ ಸರಕಾರದ 35% ಹಾಗೂ ರಾಜ್ಯ ಸರ್ಕಾರದ 15 % ಪಾಲು ಇದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಜಂಟಿ ಕೈಗಾರಿಕಾ ನಿರ್ದೇಶಕ ಗೋಕುಲದಾಸ್, ಕೆಪೆಕ್ ಅಧಿಕಾರಿ ಅರವಿಂದ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕಿ ಕವಿತಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಕೃಷಿ ಉಪನಿರ್ದೇಶಕರಾದ ಕುಮುದಾ ಸ್ವಾಗತಿಸಿ, ಉಪನಿರ್ದೇಶಕ ಶಿವಶಂಕರ್ ದಾನೇಗೊಂಡಲ್ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.