ಬಂಟ್ವಾಳ

Bantwal: ಬಂಟ್ವಾಳದಲ್ಲಿ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಶಾಸಕ ರಾಜೇಶ್ ನಾಯ್ಕ್ ಜ್ಯೋತಿ ಬೆಳಗಿಸಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಪು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಗುರುಜಯಂತಿ ಆಚರಣೆ ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಹಿಸಿ ಮಾತನಾಡಿ, ಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ಈಗ ಬಾಡಿಗೆ ಕಟ್ಟಡದಲ್ಲಿರುವ ವಿದ್ಯಾರ್ಥಿಗಳನ್ನು ಇಲಾಖೆ ವಿಳಂಬ ಮಾಡದೆ ಸ್ಥಳಾಂತರಿಸಬೇಕು ಅಲ್ಲೊಂದು ಧ್ಯಾನಮಂದಿವನ್ನೂ ನಿರ್ಮಿಸಲಾಗುವುದು ಎಂದರು.

ಜಾಹೀರಾತು


ಬಂಟ್ವಾಳ ಪುರಸಭಾ ಅಧ್ಯಕ್ಷ ಬಿ.ವಾಸು ಪೂಜಾರಿ ಮಾತನಾಡಿ, ಗುರುಗಳು ನೀಡಿದ ಬೆಳಕಿನ ಪಥದಲ್ಲಿ ಸಾಗೋಣ ಎಂದರು.
ಉಪತಹಸೀಲ್ದಾರ್ ನವೀನ್ ಬೆಂಜನದವು ಮಾತನಾಡಿ, ನಾರಾಯಣಗುರುಗಳ ವಿಚಾರಧಾರೆ ಎಲ್ಲರಿಗೂ ತಲುಪುವಂತಾಗಲಿ ಎಂದರು.
ಶ್ರೀನಾರಾಯಣಗುರು ವಸತಿ ಶಾಲೆ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಗುರು ಸಂದೇಶ ನೀಡಿ ಮೌನ ಕ್ರಾಂತಿಯ ಮೂಲಕ ಅಸಮಾನತೆ ವಿರುದ್ಧ ಹೋರಾಟ ಮಾಡಿದವರು ಗುರುಗಳು, ಕ್ರಾಂತಿ ಮೂಲಕ ಶಾಂತಿ ಮಂತ್ರ ಪಠಿಸಿದವರು ಎಂದರು.
ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ವಿದ್ಯಾರ್ಥಿಗಳು ಗುರಿ ತಲುಪಲು ನಾರಾಯಣಗುರುಗಳ ಸಂದೇಶ ಸಹಕಾರಿ ಎಂದು ಶುಭ ಹಾರೈಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಬಂಟ್ವಾಳ ಅಧ್ಹಕ್ಷ ನಾಗೇಶ್ ಪೂಜಾರಿ ನೈಬೈಲು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ ಚಂಡ್ತಿಮಾರ್ ಉಪಸ್ಥಿತರಿದ್ದರು. ಯುವವಾಹಿನಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.