ಬಂಟ್ವಾಳ

ಗ್ರಾಹಕರಲ್ಲಿ ವಿಶ್ವಾಸ ಮೂಡಿಸಿದರೆ ಸಹಕಾರಿ ಸಂಘಗಳು ಯಶಸ್ಸು: ಎಡನೀರು ಶ್ರೀಗಳು

ಜಾಹೀರಾತು

ಸಹಕಾರಿ ಸಂಘಗಳು ಗ್ರಾಹಕರಲ್ಲಿ ವಿಶ್ವಾಸವನ್ನು ಮೂಡಿಸಿ ಕೆಲಸ ನಿರ್ವಹಿಸಿದರೆ ಯಶಸ್ಸು ಕಾಣಲು ಸಾಧ್ಯ ಎಂದು ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು.

ಮಂಚಿಯ ಲಯನ್ಸ್ ಮಂದಿರದಲ್ಲಿ ಭಾನುವಾರ ಸಂಜೆ ಶ್ರೀ ಲಕ್ಷ್ಮೀನರಸಿಂಹ ವಿವಿಧೋದ್ದೇಶ ಸಹಕಾರಿ ಸಂಘದ ದಶಮ ಸಂಭ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಸಂಸ್ಥೆ ಹಾಗೂ ಗ್ರಾಹಕರ ನಡುವಿನ ಬಾಂಧವ್ಯ ವೃದ್ಧಿ ಅತ್ಯಂತ ಪ್ರಮುಖವಾದದ್ದು. ಗ್ರಾಹಕರಿಗೆ ಸಂಸ್ಥೆ ಮೇಲೆ ವಿಶ್ವಾಸ ಮೂಡಿದರೆ ಸಂಬಂಧವೃದ್ಧಿಯಾಗುತ್ತದೆ ಎಂದವರು ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ದಶಮ ಸಂಭ್ರಮದ ವಿಶೇಷ ಠೇವಣಿಪತ್ರ ವಿತರಿಸಿ ಮಾತನಾಡಿ, ಸಹಕಾರ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಅವಶ್ಯಕತೆಗಳಿಗೆ ನೆರವಾಗುತ್ತಿವೆ. ರಾಷ್ಟ್ರೀಕೃತ ಬ್ಯಾಂಕುಗಳಿಗಿಂತಲೂ ಸಹಕಾರ ಸಂಘಗಳ ಮೇಲೆ ಸ್ಥಳೀಯರು ಹೆಚ್ಚು ಒಲವು ಹೊಂದಿರುವುದು ಇದಕ್ಕೆ ಸಾಕ್ಷಿ ಎಂದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ವಹಿಸಿ ಸಂಘದ ಹತ್ತು ವರ್ಷಗಳ ಸಾಧನೆಯನ್ನು ವಿವರಿಸಿದರು.

ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಗೌರವ ಉಪಸ್ಥಿತಿಯಲ್ಲಿ ವ್ಯಾಪಾರಸ್ಥರಾದ ಜೆಫ್ರಿ ಲೂಯಿಸ್, ರಾಮಕೃಷ್ಣ ನಾಯಕ್ ಕೋಕಳ, ಅಬ್ದುಲ್ ರಹಿಮಾನ್, ಸಂಘ ಉಪಾಧ್ಯಕ್ಷ ಭಾಸ್ಕರ ಕುಲಾಲ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿರುಮಲೇಶ ಕೆ, ಆಡಳಿತ ಮಂಡಳಿ ನಿರ್ದೇಶಕರು ಉಪಸ್ಥಿತರಿದ್ದರು. ಮಹಾಲಿಂಗ ಭಟ್ ಬಿಲ್ಲಂಪದವು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.