ಬಂಟ್ವಾಳ

Bantwal: ಬೊಂಡಾಲ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಶಂಭೂರು ಎಂಆರ್ ಎಫ್ ಘಟಕಕ್ಕೆ ಭೇಟಿ

ಜಾಹೀರಾತು

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ವಿದ್ಯಾರ್ಥಿಗಳಿಂದ ಶಂಭೂರು ಎಂಆರ್ ಎಫ್ (ತ್ಯಾಜ್ಯ ನಿರ್ವಹಣಾ ಘಟಕ) ಘಟಕಕ್ಕೆ ಭೇಟಿ ನೀಡುವ ಕಾರ್ಯ ನಡೆಯಿತು.

ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದೆ ನೂರಾರು ವರ್ಷಗಳು ಹಾಗೆಯೇ ಉಳಿಯುವುದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿದೆ. ಅದನ್ನು ಪರಿಹರಿಸಲು ಪ್ಲಾಸ್ಟಿಕ್, ಬಟ್ಟೆ ಮುಂತಾದ ಅಜೈವಿಕ ವಸ್ತುಗಳನ್ನು ಬೇರ್ಪಡಿಸಿ ವಿವಿಧ ಮರುಬಳಕೆ ಉತ್ಪನ್ನಗಳ ತಯಾರಿಗಾಗಿ ಅದನ್ನು ಕಳುಹಿಸಿಕೊಡಲು ಇಂತಹ ತ್ಯಾಜ್ಯ ನಿರ್ವಹಣಾ ಘಟಕಗಳು ಕೆಲಸ ಮಾಡುತ್ತಿವೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಈ ಸಂದರ್ಭ ಹೇಳಿದರು.

ನಿರ್ವಹಣಾ ಘಟಕದ ಮೇಲ್ವಿಚಾರಕ ನವನೀತ್ ರವರು ಘಟಕದ ಚಟುವಟಿಕೆಗಳನ್ನು ವಿವರಿಸಿ ಪ್ಲಾಸ್ಟಿಕ್ ನ ಸೂಕ್ಷ್ಮ ಕಣಗಳು ಸಸ್ಯ, ಪ್ರಾಣಿ, ಮೀನಿನ ಮೂಲಕ ನಮ್ಮ ದೇಹ ಸೇರಿ ಕ್ಯಾನ್ಸರ್ ಉಂಟು ಮಾಡಬಲ್ಲದು ಎಂದರು.

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್, ಅಭಿವೃದ್ಧಿ ಅಧಿಕಾರಿ ಹರೀಶ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿದ್ಯಾ ಪುಷ್ಪರಾಜ್ ಮತ್ತು ಸದಸ್ಯರು, ಶಾಲಾ ಪೋಷಕರು, ಪಂಚಾಯತ್ ಸಿಬ್ಬಂದಿಗಳು, ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ, ಶಿಕ್ಷಕರಾದ ಹರಿಪ್ರಸಾದ್, ಭಾರತಿ ಉಪಸ್ಥಿತರಿದ್ದರು. ಈ ಸಂದರ್ಭ ಪರಿಸರದಲ್ಲಿ ಗಿಡ ನಾಟಿ ಮಾಡಲಾಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.