ಬಂಟ್ವಾಳ

Govt First Grade College Bantwal: ಅಬ್ಬಕ್ಕ ರಾಣಿಯ ಬದುಕಿನ ಮೌಲ್ಯಗಳು ನಮಗೆ ಪ್ರೇರಣೆಯಾಗಲಿ: ಸುರೇಶ್ ಕುಮಾರ್ ನಾವೂರು

ಜಾಹೀರಾತು

ಉಳ್ಳಾಲವನ್ನು ಆಳಿದ ರಾಣಿ ಅಬ್ಬಕ್ಕ ಅವರ ಬದುಕಿನ ಮೌಲ್ಯಗಳು ನಮಗೆ ಪ್ರೇರಣಾದಾಯಕ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು ಹೇಳಿದ್ದಾರೆ.

ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ೫೦೦ ಪ್ರೇರಣದಾಯಿ ಉಪನ್ಯಾಸ ಸರಣಿಯ ಮಂಗಳೂರು ವಿಭಾಗದ ೧೦೦ ಉಪನ್ಯಾಸಗಳ ೮೨ನೇ ಎಸಳು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತನ್ನ ಕರ್ತೃತ್ವ ಶಕ್ತಿಯಿಂದ  ಉಳ್ಳಾಲವನ್ನು ಮಾದರಿ ನಾಡಾಗಿ ಕಟ್ಟಿದ ರಾಣಿ ಅಬ್ಬಕ್ಕ ನಮಗೆ ಪ್ರಾತಃಸ್ಮರಣೀಯಳು ಎಂದು ಅವರು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಆಳ್ವಾಸ್ ಕಾಲೇಜು ಉಪನ್ಯಾಸಕಿ ಡಾ. ಸುಧಾರಾಣಿ ಉಳ್ಳಾಲವನ್ನು ಆಳಿದ ಹಿರಿಯ ಅಬ್ಬಕ್ಕ ಹಾಗೂ ಕಿರಿಯ ಅಬ್ಬಕ್ಕ ರಾಣಿಯರ ಬದುಕು, ಸಾಧನೆ,ಹೋರಾಟ ಮತ್ತು ಪೋರ್ಚುಗೀಸರ ವಿರುದ್ಧ ಅವರು ಪಡೆದ ಜಯ ಇತ್ಯಾದಿಗಳನ್ನು ವಿವರಿಸಿದರು. ಜಯಲಕ್ಷ್ಮಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಕಾಲೇಜಿನ ಪ್ರಿನ್ಸಿಪಾಲ್ ಡಾ ಪ್ರಕಾಶಚಂದ್ರ ಶಿಶಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರವಾಸಿಗರು ಕಟ್ಟಿಕೊಟ್ಟ ಅಬ್ಬಕ್ಕ ರಾಣಿಯ ವ್ಯಕ್ತಿಚಿತ್ರದ ವಿವರ ನೀಡಿದರು. ಐಕ್ಯೂಎಸಿ ಸಂಚಾಲಕರಾದ ಡಾ. ಬಸವರಾಜೇಶ್ವರಿ ದಿಡ್ಡಿಮನಿ ಸ್ವಾಗತಿಸಿದರು. ಚೈತ್ರಾ ಧನ್ಯವಾದ ಸಮರ್ಪಿಸಿದರು. ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.