ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ ಶಾರದಾ ಪೂಜಾ ಮಹೋತ್ಸವ ಹಿನ್ನೆಲೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಾಂತಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಗ್ರಾಮ ಗೌರವ ಪುರಸ್ಆರ ನೀಡಿ ಸನ್ಮಾನಿಸಲಾಯಿತು.
ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ 48ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್ ಎಚ್ ವಹಿಸಿದ್ದರು.
ಪ್ರಧಾನ ಧಾರ್ಮಿಕ ಉಪನ್ಯಾಸವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಹ ಕಾರ್ಯದರ್ಶಿ ಲತೇಶ್ ಬಾಕ್ರಬೈಲು ಮಾಡಿ, ದೇಶದ ಶ್ರೇಷ್ಠತೆಯ ಬಗ್ಗೆ ಹೆಮ್ಮೆ, ಸ್ವದೇಶಿ ಭಾವದ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದರು.
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಯಲ್ಲಿ 90 ಶೇಕಡಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ವಿಶೇಷ ಸಾಧನೆಗಾಗಿ ವಿದ್ಯಾರ್ಥಿ ಜಗನ್ ಹಾಗೂ ಪತ್ರಕರ್ತ ಭರತ್ ರಾಜ್ ಕಲ್ಲಡ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉದ್ಯಮ ಕ್ಷೇತ್ರದಲ್ಲಿ ಸಾಧಕರಾದ ನಾಗರತ್ನ ಪುರ್ಲಿಪಾಡಿ ಹಾಗೂ ಹಿರಿಯ 104 ವರ್ಷದ ಅಯ್ಯಪ್ಪ ವೃತದಾರಿ ಕಮಲ ಗುರುಸ್ವಾಮಿ ಕುಂಟಿಪಾಪು ಅವರಿಗೆ “ಗ್ರಾಮ ಗೌರವ” ಪುರಸ್ಕಾರ ನೀಡಿ ಗೌರವಿಸಲಾಯಿತು.
ಕೆ ಶಾಂತರಾಮ್ ಆಚಾರ್ಯ ಕಲ್ಲಡ್ಕ ಸ್ಮರಣಾರ್ಥ ನೀಡುವ “ಶಾಂತಶ್ರೀ ” ಪ್ರಶಸ್ತಿಯನ್ನು ಕಲಾ ಸೇವೆಗಾಗಿ ಭರತನಾಟ್ಯ ಕಲಾವಿದೆ ವಿದುಷಿ ವಿದ್ಯಾ ಮನೋಜ್ ಅವರಿಗೆ ನೀಡಿ ಗೌರವಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಚೆಂಡೆ, ಗೊಳ್ತಮಜಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ್ ಗೌಡ ಮಕ್ಕಾರ್, ಪ್ರಗತಿಪರ ಕೃಷಿಕ ಮಿಥುನ್ ಕುಮಾರ್ ಹೊಸಮನೆ ಉಪಸ್ಥಿತರಿದ್ದರು.
ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಯತಿನ್ ಕುಮಾರ್ ಏಳ್ತಿಮಾರು ಸ್ವಾಗತಿಸಿ, ಕಾರ್ಯದರ್ಶಿ ವಜ್ರನಾಥ ಮಡ್ಲಮಜಲ್ ವಂದಿಸಿದರು. ರಾಜೇಶ್ ಕೊಟ್ಟಾರಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.