ಕಲ್ಲಡ್ಕ

Kalladka: ಕಲ್ಲಡ್ಕ: ವೈದ್ಯರ ಸಮ್ಮುಖದಲ್ಲಿ ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ

ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಹೋಟೆಲ್ ಲಕ್ಷ್ಮಿ ಗಣೇಶ್ ಕಲ್ಲಡ್ಕದ ಸಹಕಾರದೊಂದಿಗೆ ಯಶಸ್ವಿ ಏಳನೇ ವರ್ಷದ  ಕಲ್ಲಡ್ಕದ  ಪಿಲಿ 2025 ಸಾಂಪ್ರದಾಯಿಕ ದಸರಾ ಹುಲಿಗಳ ಊದು ಪೂಜೆ ಕಾರ್ಯಕ್ರಮ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ರಾಮಾಂಗಣದಲ್ಲಿ ಉದ್ಯಮಿ ಎನ್ ರಾಜೇಂದ್ರ ಹೊಳ್ಳ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಈ ಸಂದರ್ಭ,  ಕಲ್ಲಡ್ಕದಲ್ಲಿ ಸೇವೆ ನೀಡುತ್ತಿರುವ ವೈದ್ಯರನ್ನು ಗೌರವಿಸಿ ಮಾತನಾಡಿ, ಕಲ್ಲಡ್ಕ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ  ಎಲ್ಲಾ ವೈದ್ಯರನ್ನು ಒಂದೇ ವೇದಿಕೆಯಲ್ಲಿ ಒಟ್ಟು ಸೇರಿಸಿ ಅವರ ಸಮ್ಮುಖದಲ್ಲಿ ಜನರಿಗೆ ತುರ್ತು ಅಗತ್ಯ ಇರುವಂಥ ತುರ್ತು ಚಿಕಿತ್ಸೆ ವಾಹನ ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ ಮಾಡುವ ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಪನೆ ಪ್ರಸಂಶನೀಯವಾದದ್ದು ಎಂದು ವಾಹನವನ್ನು ಲೋಕಾರ್ಪಣೆ ಮಾಡಿದರು.

ವಾಹನದ ಜವಾಬ್ದಾರಿಯನ್ನು ವಹಿಸಿಕೊಂಡ ಮಿಥುನ್ ಪೂಜಾರಿ ಅವರಿಗೆ ವಾಹನದ ಕೀಲಿಕೈ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ದಸರಾ ಹುಲಿಗಳ ಊದು ಪೂಜೆ ಕಾರ್ಯಕ್ರಮ ಜರಗಿತು.

ವೈದ್ಯರಾದ ಡಾ. ಕಮಲಾ ಪ್ರಭಾಕರ್ ಭಟ್, ಡಾ. ರೇಷ್ಮಾ ಉಳ್ಳಾಲ್, ಡಾ. ಎಚ್ ರಾಜೀವ ಶೆಟ್ಟಿ, ಡಾ. ಚಂದ್ರಶೇಖರ್, ಡಾ. ಶೈಲೇಂದ್ರ ಎಸ್ ಎಸ್, ಡಾ.ರವಿಕಿರಣ್, ಡಾ. ಮನೋಜ್, ಡಾ. ಕೆ ಆರ್ ಎಸ್ ಕಿನಿಲಾ, ಡಾ ಸುಕೇಶ್ ಕಲ್ಲಡ್ಕ, ಡಾ.ಪ್ರಶಾಂತ್ ಕುಮಾರ್ ಕಲ್ಲಡ್ಕ, ಹೈಕೋರ್ಟಿನ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಗಣಪತಿ ಸ್ವಾಮಿ, ಮೊದಲಾದವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಮೊದಲು ಕಲಾಮಯಂ ಉಡುಪಿ ಅವರಿಂದ ಜಾನಪದ ಕಲರವ ಎಂಬ ಸಾಂಸ್ಕೃತಿಕ ಕಾರ್ಯಕ್ರಮ, ವೈವಾಹಿಕ ಜೀವನದಲ್ಲಿ ಮೂರು ದಶಕ ಪೂರ್ಣಗೊಳಿಸಿದ ದಂಪತಿಗಳ ಸಂಗಮ ನಿತ್ಯದಂಪತಿ ಕಾರ್ಯಕ್ರಮ, 1ರಿಂದ 9 ವರ್ಷ ದ ಮಕ್ಕಳಿಗೆ ಬಾಲಭೋಜನ ಕಾರ್ಯಕ್ರಮ ಜರಗಿತು.

ನಾಗ ಸುಜ್ಞಾನ  ಫ್ರೆಂಡ್ಸ್ ಮುಖ್ಯಸ್ಥರಾದ ನಾಗರಾಜ್ ಕಲ್ಲಡ್ಕ ಸ್ವಾಗತಿಸಿ, ಪ್ರದೀಪ್ ಕೆಂಪುಗುಡ್ಡೆ ವಂದಿಸಿದರು. ಕುಮಾರ್ ವಿಟ್ಲ ಹಾಗೂ ಗೋಪಾಲ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

8 hours ago