ಬಂಟ್ವಾಳ

ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ, ತರಬೇತಿ

ಜಾಹೀರಾತು

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಗಾಂಧೀ ಜಯಂತಿ ಪ್ರಯುಕ್ತ  ಗಾಂಧೀಜಿ ಬದುಕು ಆಧರಿಸಿದ ರಸ ಪ್ರಶ್ನೆ ಹಾಗೂ, ತರಬೇತಿ ಕಾರ್ಯಾಗಾರ‌ವು ಗುರುವಾರ  ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದು, ಸಂಸ್ಥೆಯ ನೂತನ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್ ವಿದ್ಯಾರ್ಥಿ ವೇತನ ವಿತರಿಸಿದರು.

ಬಂಟ್ವಾಳ ಎಸ್.ವಿ.ಎಸ್.ದೇವಳ ಪ.ಪೂ.ಕಾಲೇಜು ಪ್ರಾಂಶುಪಾಲ  ಕೆ.ಎನ್.ಗಂಗಾಧರ ಆಳ್ವ, ಸಂಸ್ಥೆಯ ಅಜೀವ ಸದಸ್ಯ ಬಿ.ಕೆ.ಅಬ್ದುಲ್ಲಾ ಕುಂಞಿ ಹಾಜಿ ಬೈರಿಕಟ್ಟೆ, ಮಂಗಳೂರು ಎ.ಜೆ.ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯರಾದ ಡಾ. ಹಸೀನಾ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಸಂಸ್ಥೆಯ ಜಿಲ್ಲಾ ಘಟಕದ ಪೂರ್ವಾಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು,ಕೆ.ಕೆ.ಶಾಹುಲ್, ಜಿದ್ದಾ ಘಟಕದ ಪೂರ್ವಾಧ್ಯಕ್ಷ ಮೊಹಮ್ಮದ್ ಸಾಹೇಬ್ ಕಾರ್ಕಳ, ಬಂಟ್ವಾಳ ಘಟಕದ ಪೂರ್ವಾಧ್ಯಕ್ಷ  ರಶೀದ್ ವಿಟ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ತಾಲೂಕು ಘಟಕದ ಪೂರ್ವಾದ್ಯಕ್ಷರಾದ ರಫೀಕ್ ಹಾಜಿ ಆಲಡ್ಕ, ನೋಟರಿ ಅಬೂಬಕ್ಕರ್ ವಿಟ್ಲ, ಪ್ರಮುಖರಾದ ವಿ.ಎಚ್.ಅಶ್ರಫ್ ವಿಟ್ಲ, ಕೆ.ಎಸ್.ಮೊಹಮ್ಮದ್, ಅರ್ಶದ್ ಸರವು, ಹಾಜಿ ಡಿ.ಪಿ.ಅಹ್ಮದ್ ಶಾಫಿ, ಹಾಜಿ ಅಬ್ದುಲ್ ರಝಾಕ್ ಗೋಳ್ತಮಜಲು, ಟಿ.ಕೆ.ಮುಹಮ್ಮದ್ ಟೋಪ್ಕೋ, ಅಬೂಬಕ್ಕರ್ ಪುತ್ತು, ಇಬ್ರಾಹಿಂ ಮೊಯಿದಿನ್ ನಂದಾವರ, ಅಶ್ರಫ್ ಸಾಲೆತ್ತೂರು ಮೊದಲಾದವರು ಭಾಗವಹಿಸಿದ್ದರು. ಉಪನ್ಯಾಸಕ ಹಾಗೂ ರಾಜ್ಯ ಮಟ್ಟದ ತರಬೇತುದಾರ ಅಬ್ದುಲ್ ರಝಾಕ್ ಅನಂತಾಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಕೈಯಲ್ಲಿ ಪೂರ್ತಿ ಕುರ್ ಆನ್ ಬರೆದು ಸಾಧನೆ ಮಾಡಿರುವ ವಿದ್ಯಾರ್ಥಿನಿಯರಾದ ಸಜ್ಲ ಇಸ್ಮಾಯಿಲ್ ಹಾಗೂ ಫಾತಿಮತ್ ಅಬೀರ ಅವರನ್ನು ಸನ್ಮಾನಿಸಲಾಯಿತು. ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಶ್ಫಾಕ್ ಅಹ್ಮದ್ ಕಾರ್ಕಳ, ಪತ್ರಿಕಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಲತೀಫ್ ನೇರಳಕಟ್ಟೆ ಹಾಗೂ ಸ್ಕೌಟ್ಸ್ ನಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪುರಸ್ಕೃತರಾದ ಸಂಸ್ಥೆಯ ತಾಲೂಕು ಘಟಕದ ಪೂರ್ವಾದ್ಯಕ್ಷ ಬಿ.ಎಂ.ತುಂಬೆ ಅವರನ್ನು ಗೌರವಿಸಲಾಯಿತು. ಜಿಲ್ಲಾ ಮಟ್ಟದ ಸ್ಕೇಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಫಾತಿಮತ್ ಸೈದಾ ಅವರಿಗೆ ಪ್ರೋತ್ಸಾಹ ಧನ ನೀಡಿ ಅಭಿನಂದಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹಕೀಂ ಕಲಾಯಿ ಸ್ವಾಗತಿಸಿದರು, ಪತ್ರಿಕಾ‌ ಕಾರ್ಯದರ್ಶಿ ಆಶಿಕ್ ಕುಕ್ಕಾಜೆ ಖಿರಾತ್ ಪಠಿಸಿದರು. ಪಿ.ಮೊಹಮ್ಮದ್ ಹಾಗೂ ಹಂಝ ಬಸ್ತಿಕೋಡಿ ಆನಿಯಾ ದರ್ಬಾರ್ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪಾಧ್ಯಕ್ಷ ಆಸಿಫ್ ಇಕ್ಬಾಲ್ ಕುಂಪನಮಜಲು ವಂದಿಸಿ, ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

3 hours ago