ವಾಮದಪದವು

Siddakatte: ವೀರ ವಿಕ್ರಮ ಜೋಡುಕರೆ ಎರಡನೇ ವರ್ಷದ ‘ರೋಟರಿ ಕಂಬಳ’ ಕ್ಕೆ ಚಾಲನೆ

ದೇಶದಲ್ಲಿ ಸಿಗುವ ಕೆಲವೊಂದು ಜನಪ್ರಿಯ ಆಹಾರ ಮತ್ತು ಪಾನೀಯ ಪೊಟ್ಟಣ ಗಲ್ಲಿ ಕೂಡಾ ದಷ್ಟ -ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಶಿಸುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ. ಕೆ. ಹೇಳಿದ್ದಾರೆ.

ಜಾಹೀರಾತು

ಇಲ್ಲಿನ ಸಿದ್ದಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಭಾನುವಾರ ಏರ್ಪಡಿಸಿದ್ದ ಎರಡನೇ ವರ್ಷದ ‘ರೋಟರಿ ಕಂಬಳ’ ಉದ್ಘಾಟಿಸಿ ಅವರು ಮಾತನಾಡಿದರು.ಲೊರೆಟ್ಟೋ ಹಿಲ್ಸ್ ಸೇರಿದಂತೆ ಬಂಟ್ವಾಳ, ಮೊಡಂಕಾಪು, ಮಂಗಳೂರು ಸೆಂಟ್ರಲ್ ಮತ್ತು ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಸಹ ಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಕಿರಿಯ ಮತ್ತು ಸಬ್ ಜೂನಿಯರ್ ವಿಭಾಗದ
ಈ ಕಂಬಳ ಕಾರ್ಯಕ್ರಮದಲ್ಲಿಮಾಜಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜಮುಖಿ ಚಟುವಟಿಕೆ ಜೊತೆಗೆ ಪಬ್ಲಿಕ್ ಇಮೇಜ್ ವೃದ್ಧಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ರೋಟರಿ ಕಂಬಳ ಪೂರಕವಾಗಿದೆ ಎಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಭೇಟಿ ನೀಡಿ ಶುಭ ಹಾರೈಸಿದರು. ಲೊರೆಟ್ಟೋ ಹಿಲ್ಸ್ ಕ್ಲಬ್ಬಿನ ಮಾಜಿ ಅಧ್ಯಕ್ಷ ಎಂ. ಪದ್ಮರಾಜ್ ಬಲ್ಲಾಳ್ ಮಾವಂತೂರು ಇವರು ‘ಕಂಬಳ ಕರೆ ಉದ್ಘಾಟಿಸಿದರು. ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಬೊಮ್ಮರೆಡ್ಡಿ, ಸಿದ್ದಕಟ್ಟೆ ಕೊಡಂಗೆ ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ, ಕಕ್ಯಪದವು ಮೈರ ಕಂಬಳ ಸಮಿತಿ ಅಧ್ಯಕ್ಷ ಸುದರ್ಶನ್ ಬಜ, ರೋಟರಿ ಸಹಾಯಕ ಗವರ್ನರ್ ಡಾ.ಎ.ಜಯ ಕುಮಾರ ಶೆಟ್ಟಿ, ಉಮೇಶ್ ರಾವ್ ಮಿಜಾರು, ಕೆ.ಪದ್ಮನಾಭ ರೈ ಕಲ್ಲಡ್ಕ, ಡಾ. ರಾಜಾರಾಮ್ ಉಪ್ಪಿನಂಗಡಿ, ಪ್ರಮುಖರಾದ ಡಾ. ದೇವದಾಸ್ ರೈ, ನಾರಾಯಣ ಹೆಗ್ಡೆ, ಡಾ. ಶಿವಪ್ರಕಾಶ್, ಲೊರೆಟ್ಟೋ ಕ್ಲಬ್ ಅಧ್ಯಕ್ಷ ವಿಜಯ ಫೆರ್ನಾಂಡಿಸ್, ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಬಂಟ್ವಾಳ ಕ್ಲಬ್ಬಿನ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಸಿದ್ದಕಟ್ಟೆ ಕ್ಲಬ್ಬಿನ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜೆ, ಮೊಡಂಕಾಪು ಕ್ಲಬ್ಬಿನ ಅಧ್ಯಕ್ಷೆ ಪ್ರೀಮಾ ವೈಲೆಟ್ ಫೆರ್ನಾಂಡಿಸ್, ಮಂಗಳೂರು ಕ್ಲಬ್ಬಿನ ಅಧ್ಯಕ್ಷ ಭಾಸ್ಕರ ರೈ ಕಟ್ಟ ಶುಭ ಹಾರೈಸಿದರು.

ಪ್ರಮುಖರಾದ ಶ್ರುತಿ ಮಾಡ್ತಾ, ಡಾ.ಆತ್ಮ ರಂಜನ್ ರೈ,ಗಣೇಶ್ ಶೆಟ್ಟಿ ಸಿದ್ದಕಟ್ಟೆ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ,ಜಾನ್ ಕೆನ್ಯೂಟ್ ಮಸ್ಕರೆನ್ಹಸ್ ಉಪ್ಪಿನಂಗಡಿ, ಡಾ.ಪ್ರಹ್ಲಾದ್ ಮೈಸೂರು, ಪುಷ್ಪರಾಜ ಹೆಗ್ಡೆ, ಕಿರಣ್ ಹೆಗ್ಡೆ ಮಾಣಿ,ಕಿರಣ್ ಕುಮಾರ್ ಮಂಜಿಲ, ಮೈಕಲ್ ಡಿಕೋಸ್ತ, ಮೋಹನ್ ಕೆ.ಶ್ರೀಯಾನ್ ರಾಯಿ, ಮೊಹಮ್ಮದ್ ಯಾಸೀರ್ ಕಲ್ಲಡ್ಕ, ಟೀನಾ ಡಿಕೊಸ್ತ ಸಿದ್ದಕಟ್ಟೆ,ಪ್ರಸನ್ನ ರಾವ್ ಮೊಡಂಕಾಪು, ವಿಕಾಸ್ ಕೋಟ್ಯಾನ್ ಮಂಗಳೂರು, ರಾಜೇಶ್ ಶೆಟ್ಟಿ ಸೀತಾಳ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಮೈಕಲ್ ಡಿಕೋಸ್ತ, ಹೊನ್ನಯ ಕಾಟಿಪಳ್ಳ, ಪಿ.ಎ.ರಹೀಂ ಬಿ.ಸಿ.ರೋಡ್, ಕೆ.ರಮೇಶ್ ನಾಯಕ್, ಅಲೆಕ್ಸಾಂಡರ್ ಲೋಬೋ, ಶಶಿಧರ ಶೆಟ್ಟಿ ಕಲ್ಲಾಪು, ಸೀತಾರಾಮ ಶೆಟ್ಟಿ, ಹರೀಶ ಶೆಟ್ಟಿ,ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಹಾಗೂ ಕ್ಲಬ್ ಸದಸ್ಯ ಪ್ರಭಾಕರ ಪ್ರಭು ಜಿಲ್ಲಾ ತೀರ್ಪುಗಾರ ವಿಜಯ ಕುಮಾರ್ ಕಂಗಿನಮನೆ, ಉಮೇಶ್ ಹಿಂಗಾಣಿ ಮತ್ತಿತರರಿದ್ದರು.

ಸಿದ್ದಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ” ರೋಟರಿ ಕಂಬಳ ” ಕೂಟಕ್ಕೆ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ. ಕೆ. ಇವರಿಂದ ಭಾನುವಾರ ಅಧಿಕೃತ ಚಾಲನೆ ನೀಡಲಾಯಿತು.

ಕಂಬಳದ ಸಾರಥ್ಯ ವಹಿಸಿದ್ದ ಮೊಡಂಕಾಪು ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಎಲಿಯಾಸ್ ಸಾಂಕ್ಟೀಸ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ ದರು. ರಾಜಗೋಪಾಲ್ ರೈ ವಂದಿಸಿದರು. ಮಾಜಿ ಅಧ್ಯಕ್ಷ ವಕೀಲ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಮತ್ತು ಮಾಜಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ. ಕೆ. ಮತ್ತು ಸ್ಥಳದಾನಿ ಚಂದ್ರಹಾಸ್ ಕೊಡಂಗೆ ಇವರನ್ನು ಸನ್ಮಾನಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.