ಬಂಟ್ವಾಳ: ತೆಂಗಿನಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿ ಕಾಲುಗಳ ಸ್ವಾಧೀನವನ್ನೇ ಕಳೆದುಕೊಂಡು, ಮಲಗಿದ್ದ ಸ್ಥಿತಿಯಲ್ಲೇ ಇರಬೇಕಾಗಿರುವ ವಿಟ್ಲದ ರವೀಂದ್ರ ನಾಯ್ಕ್ ಅವರಿಗೆ ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ದಾಸಕೋಡಿಯ ಕಲಾಶ್ರಯದ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು, ತಮ್ಮ ಸಂಸ್ಥೆಯಾದ ಕಲಾಶ್ರಯ ದಾಸಕೋಡಿ ಮೂಲಕ ಹೊಸ ಮನೆಯೊಂದನ್ನು ನಿರ್ಮಿಸಿಕೊಟ್ಟಿದ್ದಾರೆ.
ಜಾಹೀರಾತು
ಶೃಂಗೇರಿ ಶಾರದಾಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸಮ್ಮುಖ ನೂತನ ಮನೆಯನ್ನು ಹಸ್ತಾಂತರಿಸಿದರು.
ತನ್ನ ಸಂಪಾದನೆಯ ಶೇ.50ರಷ್ಟನ್ನು ಬಡವರ ಸೇವಾ ಕಾರ್ಯಗಳಿಗೆ ವಿನಿಯೋಗಿಸುವ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು, ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಿರಿಯರಿಗೆ ವೃದ್ಧಾಪ್ಯ ವೇತನ, ಭೂರಹಿತ ಬಡವರಿಗೆ ಭೂದಾನ, ನಿವೇಶನರಹಿತರಿಗೆ ಮನೆ ನಿರ್ಮಾಣ ಇತ್ಯಾದಿ ಸೇವಾ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಮನೆ ನಿರ್ಮಿಸಿಕೊಂಡುವ ಮೂಲಕ ಸಂಕಷ್ಟದಲ್ಲಿದ್ದವರಿಗೆ ಆಶ್ರಯವಾದ ಕಲಾಶ್ರಯ ದಾಸಕೋಡಿ"