ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕ ಚಿತ್ರಕಲಾ ಶಿಕ್ಷಕರು ಕಲಾನಿಧಿ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ವಿಶೇಷ ಸಾಧನೆಗೈದ ಸಾಧಕರನ್ನು ಸಮಾಜದಲ್ಲಿ ಗುರುತಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶೈಕ್ಷಣಿಕ ಸಮಿತಿಯು ಕಲಾನಿಧಿ ಪ್ರಶಸ್ತಿ ಪ್ರಕಟಿಸಿದೆ.

2023ರ ಸಾಲಿನ ಕಲಾನಿಧಿ ಪ್ರಶಸ್ತಿಗೆ ಮುಲ್ಕಿ ಪಂಜಿನಡ್ಕ ಅನುದಾನಿತ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವೆಂಕಿ ಪಲಿಮಾರು, 2024ನೇ ಸಾಲಿನ ಕಲಾ ನಿಧಿ ಪ್ರಶಸ್ತಿಗೆ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿ ಕೆ ವಿಟ್ಲ ಹಾಗೂ 2025ನೇ ಸಾಲಿನ ಕಲಾ ಪ್ರಶಸ್ತಿಗೆ ಮಂಗಳೂರಿನ ಕೆನರಾ ಡೊಂಗರಕೇರಿ ಪ್ರೌಢಶಾಲೆಯ ಕಲಾ ಶಿಕ್ಷಕಿ ರಾಜೇಶ್ವರಿ ಕೆ ಆಯ್ಕೆಯಾಗಿದ್ದಾರೆ.

ಕಲಾವಿದರಾದ ಗಣೇಶ್ ಸೋಮಯಾಜಿ, ಗೋಪಾಡ್ಕರ್, ಮೋಹನ್ ಕುಮಾರ್ ಪೆರ್ಮುದೆ, ಎಂ ಎಸ್ ಪುರುಷೋತ್ತಮ್ ಸುಳ್ಯ, ಮನೋರಂಜನಿ ರಾವ್ ಇವರನ್ನು ಒಳಗೊಂಡ ಆಯ್ಕೆ ಸಮಿತಿಯು ಈ ಪ್ರಶಸ್ತಿಯನ್ನು ಪ್ರಕಟಿಸಿದೆ. ದ.ಕ.ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯು ದ. ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಲ್ನಾಡು ಇವರ ಸಹಕಾರದೊಂದಿಗೆ ಕಲಾನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ ಅಕ್ಟೋಬರ್ 18ರ ಶನಿವಾರ ಬೆಳಿಗ್ಗೆ 10.30ಕ್ಕೆ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕ ಶಶಿಧರ ಜಿ ಎಸ್  ಗಣ್ಯ ಅತಿಥಿಗಳಾಗಿ ಭಾಗವಹಿಸುವರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಸ್ಥೆಯ ಅಧ್ಯಕ್ಷ ತುಕಾರಾಮ ಪೂಜಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ ವಿಟ್ಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಶಂಕರ್ ರಾವ್‌ ಮಂಚಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶೈಕ್ಷಣಿಕ ಸಮಿತಿಯ ಅಧ್ಯಕ್ಷರಾದ ಗಣೇಶ್ ಸೋಮಯಾಜಿ ತಿಳಿಸಿದ್ದಾರೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕ ಚಿತ್ರಕಲಾ ಶಿಕ್ಷಕರು ಕಲಾನಿಧಿ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*