ಬಂಟ್ವಾಳ

ಅ.26ರಂದು ಮೋಂತಿಮಾರು ದೇವಸ್ಥಾನದಲ್ಲಿ ಮಹಾಪವಮಾನ ಯಾಗ

ಜಾಹೀರಾತು

ವಿಶ್ವ ಹಿಂದೂ ಪರಿಷದ್, ಬಜರಂಗ ದಳ, ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕ, ಕಲ್ಲಡ್ಕ ಪ್ರಖಂಡ ಹಾಗೂ ಮಂಚಿ ಶ್ರೀ ಮಹಾ ಪವಮಾನ ಯಾಗ ಸಮಿತಿಯ ಸಹಯೋಗದಲ್ಲಿ ಶ್ರೀ ಮಹಾ ಪವಮಾನ ಯಾಗ, ಶ್ರೀ ರಾಮತಾರಕ ಯಜ್ಞ, ಸಾಮೂಹಿಕ ಗೋಪೂಜೆ ಹಾಗೂ ಧರ್ಮ ಜಾಗೃತಿ ಸಭೆಯು ಅ.26ರಂದು ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಯಾಗ ಸಮಿತಿ ಅಧ್ಯಕ್ಷ ವಿಕಾಸ್‌ಕುಮಾರ್ ಪಿ. ತಿಳಿಸಿದರು.

ಶನಿವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಲೋಕಕಲ್ಯಾಣಾರ್ಥ ಹಾಗೂ ಗ್ರಾಮದಲ್ಲಿ ಸುಭೀಕ್ಷೆ ನೆಲೆಸುವ ದೃಷ್ಟಿಯಿಂದ ಈ ಯಾಗವನ್ನು ಆಯೋಜಿಸಲಾಗಿದ್ದು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಪೌರೋಹಿತ್ಯದಲ್ಲಿ ಬೆಳಗ್ಗೆ 7ಕ್ಕೆ ಪವಮಾನ ಪಾರಾಯಣ ಶ್ರೀ ರಾಮತಾರಕ ಯಜ್ಞ ಹಾಗೂ ಶ್ರೀ ಮಹಾ ಪವಮಾನ ಯಾಗ ಪ್ರಾರಂಭಗೊಳ್ಳಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಸಾಮೂಹಿಕ ಗೋಪೂಜೆ, 11ಕ್ಕೆ ಯಾಗದ ಪೂರ್ಣಾಹುತಿಯ ಬಳಿಕ ಧರ್ಮಜಾಗೃತಿ ಸಭೆ ನಡೆಯಲಿದ್ದು, ಕನ್ಯಾಡಿ ಶ್ರೀರಾಮ ಕ್ಷೇತ್ರದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಶೆಕೋಡಿ ಸೂರ್ಯನಾರಾಯಣ ಭಟ್ ಯಾಗಫಲ ಸಂದೇಶ ನೀಡಲಿದ್ದು, ಆರ್‌ಎಸ್‌ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್.ಪ್ರಕಾಶ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ದ.ಕ.ಸಂಸದ ಬ್ರಿಜೇಶ್ ಚೌಟ, ಮೈಸೂರು ಮಾಜಿ ಸಂಸದ ಪ್ರತಾಪಸಿಂಹ, ವಿಹಿಂಪ ಪ್ರಾಂತ ಕಾರ್ಯದರ್ಶಿ ಶರಣ್ ಪಂಪುವೆಲ್, ಕೈರಂಗಳ ಅಮೃತಧಾರಾ ಗೋಶಾಲೆಯ ಅಧ್ಯಕ್ಷ ಟಿ.ಜಿ.ರಾಜಾರಾಮ್ ಭಟ್, ವಿಹಿಂಪ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್‌ಕುಮಾರ್ ರೈ, ಕಲ್ಲಡ್ಕ ಪ್ರಖಂಡದ ಅಧ್ಯಕ್ಷ ಸಚಿನ್ ಮೆಲ್ಕಾರ್, ಹಿಂದೂ ಮುಖಂಡ ಮಿಥುನ್ ಪೂಜಾರಿ ಕಲ್ಲಡ್ಕ, ಬಜರಂಗದಳ ಸಂಚಾಲಕ ಅಮಿತ್ ಕಲ್ಲಡ್ಕ ಭಾಗವಹಿಸಲಿದ್ದು, ಯಾಗ ಸಮಿತಿ ಅಧ್ಯಕ್ಷ ವಿಕಾಸ್‌ಕುಮಾರ್ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಅನ್ನಪ್ರಸಾದ ನೆರವೇರಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಪ್ರಮುಖರಾದ ರಮೇಶ್ ರಾವ್ ಪತ್ತುಮುಡಿ, ಪದ್ಮನಾಭ ಸಾಲಿಯಾನ್, ಯಶೋಧ ಶೆಟ್ಟಿ, ಮಾಧವ ಅಂಚನ್, ಸಂತೋಷ್ ಗುಂಡಿಮಜಲು, ದೀಕ್ಷಿತ್ ಶೆಟ್ಟಿ ನಾಡಾಜೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.