ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಈ ಸಂದರ್ಭ ಮಾತನಾಡಿದ ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ಕಿತ್ತೂರು ಚೆನ್ನಮ್ಮನ ಜೀವನಾದರ್ಶನಗಳು ಪ್ರೇರಣೆಯಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿ, ಮಹಿಳೆಯರಲ್ಲಿ ಸ್ವಾತಂತ್ರ್ಯ ಹೋರಾಟ ಮಾಡಿದವರ ಪೈಕಿ ಕಿತ್ತೂರು ರಾಣಿ ಚೆನ್ನಮ್ಮ ಮುಂಚೂಣಿಯಲ್ಲಿದ್ದು, ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಎಂದರು.

ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ದಿವಾಕರ ಮುಗುಳಿಯ, ಉಪತಹಸೀಲ್ದಾರ್ ಗಳಾದ ಶಿವಪ್ರಸಾದ್, ನವೀನ್ ಕುಮಾರ್ ಬೆಂಜನಪದವು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಉಪಸ್ಥಿತರಿದ್ದರು.


Be the first to comment on "ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ"