ಬಂಟ್ವಾಳ

ಅಂದು ಲೇವಡಿ ಮಾಡಿದವರು ಇಂದು ನಕಲು ಮಾಡ್ತಿದ್ದಾರೆ: ಬಂಟ್ವಾಳದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಎಚ್.ಎಂ.ರೇವಣ್ಣ

ಪಂಚಗ್ಯಾರಂಟಿ ಯೋಜನೆ ವಿರೋಧಿಸಿದವರು ಇಂದು ಅದರ ನಕಲು ಮಾಡುತ್ತಿದ್ದಾರೆ ಎಂದು ರಾಜ್ಯ ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.

ಬಂಟ್ವಾಳದ ಬಿ.ಸಿ.ರೋಡಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಆಶ್ರಯದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಹೀರಾತು

ಗ್ಯಾರಂಟಿ ಸವಲತ್ತು ಪಡೆದವರೇ ಯೋಜನೆಯನ್ನು ಟೀಕಿಸುತ್ತಿದ್ದಾರೆ ಎಂದ ಅವರು, 98594 ಕೋಟಿ ರೂ‌. ಹಣವನ್ನು ಗ್ಯಾರಂಟಿ  ಯೋಜನೆಯ ಮೂಲಕ ಸರಕಾರ ಜನರ ಖಾತೆಗೆ  ತಲುಪಿಸಿದೆ. 560 ಕೋಟಿ ಶಕ್ತಿ ಯೋಜನೆಯ ಮೂಲಕ  ಪ್ರಯಾಣಿಸಿರುವುದು  ವಿಶ್ವದಾಖಲೆಯಾಗಿದೆ ಎಂದರು.

ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ಗೃಹಲಕ್ಷ್ಮೀ ಫಲಾನುಭವಿಗಳ  ಸ್ವಸಹಾಯ ಸಂಘಗಳನ್ನು ಉದ್ಘಾಟಿಸಿ  ಮಾತನಾಡಿ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗಾಗಿ ಕೆಲಸ ಮಾಡುವ ಅನುಷ್ಠಾನ ಸಮಿತಿಗೆ ಬಹುಮಾನ ನೀಡಬೇಕು. ದ.ಕ. ಜಿಲ್ಲೆಗೆ 2025 ರ ಪ್ರಥಮ ಬಹುಮಾನವನ್ನು ನೀಡುವಂತೆ ವಿನಂತಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ  ನರ್ವಾಡೆ ವಿನಾಯಕ ಕಾರ್ಬಾರಿ, ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್, ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗೃಹಲಕ್ಷ್ಮೀ ಜಿಲ್ಲಾ ನೋಡಲ್ ಅಧಿಕಾರಿ ಉಸ್ಮಾನ್ , ಕಡಬ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತೀ ಹೆಚ್ಚು ಸಂಘ ರಚನೆ  ಮಾಡಿದ ಪಂಚಾಯತಿಗಳನ್ನು ಗುರುತಿಸಲಾಯಿತು. ವ್ಯವಸ್ಥಾಪಕಿ ಸುಧಾ ಅವರನ್ನು ಗೌರವಿಸಲಾಯಿತು. ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿ, ವಂದಿಸಿದರು., ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಪ್ರಾಸ್ತವಿಕವಾಗಿ ಮಾತನಾಡಿದರು.ಪಿಡಿಓ ಸುನೀಲ್ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.