ಬಂಟ್ವಾಳ

ಬಂಟ್ವಾಳದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

ಬಂಟ್ವಾಳ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.೧ ಮತ್ತು ನಂ ೨ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ನಡೆಯಿತು.

ಜಾಹೀರಾತು

ಪ್ರಭಾರ ಎಕ್ಸಿಕ್ಯುಟಿವ್ ಎಂಜಿನಿಯರ್ ಸಂತೋಷ್ ನಾಯಕ್ ಆಗಮಿಸಿದ ಬಳಕೆದಾರರ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ಅಹವಾಲುಗಳ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.

ಬಳಕೆದಾರರ ಪರವಾಗಿ ಮಾತನಾಡಿದ ಲಕ್ಷ್ಮೀನಾರಾಯಣ ಬಂಟ್ವಾಳ, ಮೆಸ್ಕಾಂ ಸಾರ್ವಜನಿಕರಿಂದ ಎಲ್ಲವನ್ನೂ ಪಡೆಯುತ್ತಿದೆ, ಆದರೆ ಸಾರ್ವಜನಿಕರಿಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿ, ಕಚೇರಿಗೆ ಆಗಮಿಸುವವರಲ್ಲಿ ಯಾರು ಕಾಯಂ, ಯಾರು ಗುತ್ತಿಗೆ ನೌಕರರು ಎಂದು ಗೊತ್ತಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಗಮಿಸುತ್ತಿಲ್ಲ. ಸಾರ್ವಜನಿಕರ ದುಡ್ಡಿಗೆ ನ್ಯಾಯ ದೊರಕುತ್ತಿಲ್ಲ. ನಿವೃತ್ತರ ಪಿಂಚಣಿಗೂ ಜನರ ದುಡ್ಡನ್ನು ಪಡೆಯಲಾಗುತ್ತಿದೆ. ಒಂದು ಸಿಬ್ಬಂದಿಗೆ ಎರಡೆರಡು ಕೆಲಸ ಕೊಡಲಾಗುತ್ತಿದೆ. ಸರಕಾರದ ಮಾರ್ಗಸೂಚಿ ಪ್ರಕಾರ, ಕೆಇಆರ್ ಸಿಗೆ ಅಫಿದವಿತ್ ಕೊಟ್ಟಂತೆ ಕೆಲಸ ಮಾಡಿ, ಸರಕಾರದ ದುಡ್ಡು ಪೋಲಾಗದಂತೆ ನೋಡಿಕೊಳ್ಳಿ ಎಂದರು.

ಬಡಗುಂಡಿ ಎಂಬಲ್ಲಿ ಟ್ರಾನ್ಸ್ ಫಾರ್ಮರ್ ಬೀಳಲಿಕ್ಕಾಗಿದೆ. ಇಲ್ಲಿ ಬಳ್ಳಿ, ಕಂಬಕ್ಕೆ ಅನ್ಯೋನ್ಯತೆ ಇದ್ದಂತಿದೆ. ಆಗಾಗ ಟ್ರಿಪ್ ಆಗುತ್ತದೆ. ಕಂಬ ಸ್ಥಾಪನೆಯಿಂದ ಹಿಡಿದು ಎಲ್ಲ ಕೆಲಸಗಳವರೆಗು ನಿಯಮ ಪಾಲನೆ ಆಗುತ್ತಿದೆಯೇ ಎಂಬುದನ್ನು ಗಮನಹರಿಸಿ ಕಚೇರಿಗೆ ಸಿಸಿ ಕ್ಯಾಮರಾ, ಬಯೋಮೆಟ್ರಿಕ್ ಅಳವಡಿಸುವಂತೆ ಒತ್ತಾಯಿಸಿ, ತಾಂತ್ರಿಕ ಕೋರ್ಸ್ ಮಾಡದವರನ್ನು ಇಂಜಿನಿಯರ್ ಮಾಡಬೇಡಿ ಎಂದರು,

ಬಳಕೆದಾರರ ಪರವಾಗಿ ಜೆರಾಲ್ಡ್ ಡಿಸೋಜ ಮಾತನಾಡಿ, ತಲಪಾಡಿ ಸ್ಟೇಶನ್ ನಿಂದ ಕುಡಿಯುವ ನೀರು ಸರಬರಾಜು ಸ್ಥಾವರಕ್ಕೆ ವಿದ್ಯುತ್ ತಂತಿಗಾಗಿ ಪೈಪ್ ಹಾಕಿದ ವಿಧಾನ ಸರಿ ಇಲ್ಲ, ನಾಳೆ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಸಾರ್ವಜನಿಕರಾದ ಅಮ್ಟಾಡಿ ಏರ್ಯ ಸತೀಶ್, ಮೆಲ್ವಿನ್ ಲೋಬೊ, ಗಿರಿಧರ ಪ್ರಭು ವಿವಿಧ ಅಹವಾಲು ಮಂಡಿಸಿದರು. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಎದುರು ಹೈವೋಲ್ಟೇಜ್ ವಯರ್ ನಿಂದ ಆಗುವ ಸಮಸ್ಯೆ ಕುರಿತು ಸಾರ್ವಜನಿಕರು ದೂರಿದರು. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರುಗಳಾದ ನಾರಾಯಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಪ್ರಭಾರ ಅಕೌಂಟ್ಸ್ ಆಫೀಸರ್ ಚಂದ್ರಶೇಖರ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

51 minutes ago