Bantwal: ನೃತ್ಯಧಾರಾ, ಕಲಾನಯನ ಪ್ರಶಸ್ತಿ ಪ್ರದಾನ

ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ), ಪುತ್ತೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ನೃತ್ಯಧಾರಾ ಮತ್ತು ಯಕ್ಷಗಾನ ಹಾಸ್ಯ ಕಲಾವಿದ ಕೀರ್ತಿಶೇಷ ರಸಿಕರತ್ನ ನಯನಕುಮಾರ್ ಸ್ಮರಣಾರ್ಥ ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಸಂಜೆಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ಜಾಹೀರಾತು

ದೀಪಪ್ರಜ್ವಲನ ಬಳಿಕ ಕಲಾಕೇಂದ್ರದ ವಿದ್ಯಾರ್ಥಿನಿಯರಿಂದ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು.  ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೃತ್ಯಗುರು ಪುತ್ತೂರು ವಿಶ್ವಕಲಾನಿಕೇತನದ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ.ರೈ ಕುದ್ಕಾಡಿ ವಹಿಸಿ ಮಾತನಾಡಿ, ಭರತನಾಟ್ಯ ಕಲೆಗೆ ಅವಕಾಶಗಳೊಂದಿಗೆ ಪ್ರೋತ್ಸಾಹಗಳು ದೊರಕುತ್ತಿದ್ದು, ಸಾಂಸ್ಕೃತಿಕವಾಗಿ ನಮ್ಮ ಬೆಳವಣಿಗೆಗೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ಉತ್ತಮ ಕೆಲಸವನ್ನು ಮಾಡುತ್ತಿದೆ ಎಂದು ಶುಭ ಹಾರೈಸಿದರು.

ಕಲಾನಯನ ಪ್ರಶಸ್ತಿಯನ್ನು ಸಂಶೋಧಕ, ವಿಶ್ರಾಂತ ಪ್ರಾಧ್ಯಾಪಕ ಡಾ. ವೈ.ಉಮಾನಾಥ ಶೆಣೈ ಅವರಿಗೆ ನೀಡಿ ಗೌರವಿಸಲಾಯಿತು.  ಶೆಣೈ ಹಾಗೂ ಅವರ ಪತ್ನಿ ನಿವೃತ್ತ ಅಧಿಕಾರಿ ವಿಜಯಕುಮಾರಿ ಶೆಣೈ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ವೈ.ಉಮಾನಾಥ ಶೆಣೈ, ನಮ್ಮ ಕಲೆ, ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಭರತನಾಟ್ಯ ಕಲಿಕೆಗೆ ವಿದ್ಯಾರ್ಥಿಗಳನ್ನು ಪೋಷಕರು ಕಳುಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಬೆಳಕು ವಿನ್ಯಾಸಕಾರ ಪೃಥ್ವಿನ್ ಕೆ. ಉಡುಪಿ ಅವರನ್ನು ಸನ್ಮಾನಿಸಲಾಯಿತು. ಸಂಚಾಲಕ ಉದಯ ವೆಂಕಟೇಶ ಭಟ್  ಸನ್ಮಾನಿತರ ಪರಿಚಯ ಮಾಡಿ, ಸ್ವಾಗತಿಸಿ ವಂದಿಸಿದರು. ನೃತ್ಯನಿರ್ದೇಶಕಿ ರೋಹಿಣಿ ಉದಯ್ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ),ಬೆಳೆದುಬಂದ ದಾರಿಯನ್ನು ವಿವರಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwal: ನೃತ್ಯಧಾರಾ, ಕಲಾನಯನ ಪ್ರಶಸ್ತಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*