ಬಂಟ್ವಾಳ

Bantwal: ನೃತ್ಯಧಾರಾ, ಕಲಾನಯನ ಪ್ರಶಸ್ತಿ ಪ್ರದಾನ

ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ), ಪುತ್ತೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ನೃತ್ಯಧಾರಾ ಮತ್ತು ಯಕ್ಷಗಾನ ಹಾಸ್ಯ ಕಲಾವಿದ ಕೀರ್ತಿಶೇಷ ರಸಿಕರತ್ನ ನಯನಕುಮಾರ್ ಸ್ಮರಣಾರ್ಥ ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಸಂಜೆಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ಜಾಹೀರಾತು

ದೀಪಪ್ರಜ್ವಲನ ಬಳಿಕ ಕಲಾಕೇಂದ್ರದ ವಿದ್ಯಾರ್ಥಿನಿಯರಿಂದ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು.  ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೃತ್ಯಗುರು ಪುತ್ತೂರು ವಿಶ್ವಕಲಾನಿಕೇತನದ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ.ರೈ ಕುದ್ಕಾಡಿ ವಹಿಸಿ ಮಾತನಾಡಿ, ಭರತನಾಟ್ಯ ಕಲೆಗೆ ಅವಕಾಶಗಳೊಂದಿಗೆ ಪ್ರೋತ್ಸಾಹಗಳು ದೊರಕುತ್ತಿದ್ದು, ಸಾಂಸ್ಕೃತಿಕವಾಗಿ ನಮ್ಮ ಬೆಳವಣಿಗೆಗೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ಉತ್ತಮ ಕೆಲಸವನ್ನು ಮಾಡುತ್ತಿದೆ ಎಂದು ಶುಭ ಹಾರೈಸಿದರು.

ಕಲಾನಯನ ಪ್ರಶಸ್ತಿಯನ್ನು ಸಂಶೋಧಕ, ವಿಶ್ರಾಂತ ಪ್ರಾಧ್ಯಾಪಕ ಡಾ. ವೈ.ಉಮಾನಾಥ ಶೆಣೈ ಅವರಿಗೆ ನೀಡಿ ಗೌರವಿಸಲಾಯಿತು.  ಶೆಣೈ ಹಾಗೂ ಅವರ ಪತ್ನಿ ನಿವೃತ್ತ ಅಧಿಕಾರಿ ವಿಜಯಕುಮಾರಿ ಶೆಣೈ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ವೈ.ಉಮಾನಾಥ ಶೆಣೈ, ನಮ್ಮ ಕಲೆ, ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಭರತನಾಟ್ಯ ಕಲಿಕೆಗೆ ವಿದ್ಯಾರ್ಥಿಗಳನ್ನು ಪೋಷಕರು ಕಳುಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಬೆಳಕು ವಿನ್ಯಾಸಕಾರ ಪೃಥ್ವಿನ್ ಕೆ. ಉಡುಪಿ ಅವರನ್ನು ಸನ್ಮಾನಿಸಲಾಯಿತು. ಸಂಚಾಲಕ ಉದಯ ವೆಂಕಟೇಶ ಭಟ್  ಸನ್ಮಾನಿತರ ಪರಿಚಯ ಮಾಡಿ, ಸ್ವಾಗತಿಸಿ ವಂದಿಸಿದರು. ನೃತ್ಯನಿರ್ದೇಶಕಿ ರೋಹಿಣಿ ಉದಯ್ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ),ಬೆಳೆದುಬಂದ ದಾರಿಯನ್ನು ವಿವರಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.