ಬಂಟ್ವಾಳ

ಬಂಟ್ವಾಳದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟ

ಬಂಟ್ವಾಳ ಎಸ್.ವಿ.ಎಸ್. ಶಾಲಾ ಆಟದ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ನಾವೂರು ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟ ನಡೆಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಬೆಂಜನಪದವು ಜಾಗದಲ್ಲಿ ಖೇಲ್ ಇಂಡಿಯಾ ಮುಖಾಂತರ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಬಂಟ್ವಾಳದಂಥ ಜಾಗದಲ್ಲಿ ಕ್ರೀಡಾಂಗಣವಿಲ್ಲ ಎಂಬುದು ಬೇಸರದ ಸಂಗತಿ. ಇದಲ್ಲದೆ,ಶಟಲ್, ಬ್ಯಾಡ್ಮಿಂಟನ್ ರೀತಿಯ ಕ್ರೀಡಾಕೂಟಗಳು ತಾಲೂಕು ಕೇಂದ್ರದ ಜಾಗದಲ್ಲಿ ನಡೆಯುವ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟಗಳು ಬಂಟ್ವಾಳದಲ್ಲೇ ನಡೆಯುವಂಥ ವ್ಯವಸ್ಥೆ ನಿರ್ಮಾಣವಾಗಬೇಕು ಎಂದರು.

ಮಾಜಿ ಸಚಿವ ರಮಾನಾಥ ರೈ ಶುಭ ಹಾರೈಸಿದರು, ಬುಡಾ ಅಧ್ಯಕ್ಷ ಬೇಬಿ ಕುಂದರ್ ಕೂಟ ಉದ್ಘಾಟಿಸಿದರು. ನಾವೂರು ಗ್ರಾಪಂ ಅಧ್ಯಕ್ಷೆ ಇಂದಿರಾ, ಬಂಟ್ವಾಳ ತಹಸೀಲ್ದಾರ್ ಮಂಜುನಾಥ್,  ಬಿಇಒ ಮಂಜುನಾಥನ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಎಸ್.ವಿ.ಎಸ್. ಶಾಲಾ ಮುಖ್ಯ ಶಿಕ್ಷಕಿ ರೋಷನಿ, ಶಿಕ್ಷಕರ ಸಂಘಟನೆಯ ಅಖಿಲ್ ಶೆಟ್ಟಿ, ಜಗದೀಶ್ ರೈ, ನವೀನ್ ಪಿಎಸ್, ಸುಕನ್ಯಾರತ್ನ, ಇಂದುಶೇಖರ, ಇಸಿಓಗಳಾದ ರಮಾನಂದ ನೂಜಿಪ್ಪಾಡಿ, ಸುಧಾ, ಪ್ರತಿಮಾ, ನಾವೂರು ಪಿಡಿಒ ರಾಬರ್ಟ್ ಫೆರ್ನಾಂಡೀಸ್, ಸಿಆರ್ ಪಿ ಆಂಜನೇಯ, ಸರಕಾರಿ ನೌಕರರ ಸಂಘದ ತಾಲೂಕು ನಿಕಟಪೂರ್ವ ಅಧ್ಯಕ್ಷ ಉಮಾನಾಥ ರೈ ಮೇರಾವು, ಉದ್ಯಮಿ ಶನ್ಫತ್ ಶರೀಫ್ ಸಹಿತ ನಾನಾ ಸ್ವಯಂಸೇವಾ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.  ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ ಕಾರ್ಯಕ್ರಮ ನಿರ್ವಹಿಸಿದರು.ಚಿನ್ನಪ್ಪ ಜಾಲ್ಸೂರು ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.