ವಿಟ್ಲ

veerakamba: ಪಂಚಾಯತ್ ಹಂತದಲ್ಲೇ ಲೇಔಟ್ ಅನುಮತಿಗೆ ಗ್ರಾಮಸಭೆಯಲ್ಲಿ ಒತ್ತಾಯ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ  2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ವಿರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಲಲಿತ ಅಧ್ಯಕ್ಷತೆಯಲ್ಲಿ ಮಂಗಳವಾರ ಜರಗಿತು.

ಜಾಹೀರಾತು

ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯಕುಮಾರಿ  ಭಾಗವಹಿಸಿದ್ದರು.

ವೀರಕಂಭ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗಡಿ ಮುಂಗಟ್ಟುಗಳಿಂದ  ಗ್ರಾಮ ಪಂಚಾಯತ್ ಆದಾಯಕ್ಕೆ ತೊಂದರೆ ಆಗುತಿದ್ದು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು, ವೀರಕಂಬ ಗ್ರಾಮಕ್ಕೆ ಪೂರ್ಣ ಅವಧಿಗೆ ಗ್ರಾಮ ಕರಣಿಕರ ನೇಮಕ ಮಾಡಬೇಕು, 9./11 ಲೇ ಔಟ್ ಅನುಮತಿ ಬೂಡದ ಬದಲು ಪಂಚಾಯತ್ ಹಂತದಲ್ಲಿ ಆಗಬೇಕು, ಗ್ರಾಮದಲ್ಲಿ ನಿಗದಿಪಡಿಸಿದ ಗೋ ಮಾಳ ಜಾಗವನ್ನು ಗುರುತಿಸಿ ಗಡಿ ಗುರುತು ಮಾಡಬೇಕು, ನಾರುಕೋಡಿ ಪರಿಸರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಲ್ಲಿನ ಕೋರೆ ಪರಿಣಾಮಗಳ ಕುರಿತು ಗ್ರಾಮಸ್ಥರು ಗಮನ ಸೆಳೆದರು.

ಗ್ರಾಮದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಪ್ರಾರಂಭವಾಗಿದ್ದು ಇದರ ಸದ್ಬಳಕೆಗೆ ಗ್ರಾಮಸ್ಥರು ಸಹಕರಿಸಬೇಕೆಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನವಿ ಮಾಡಿದರು.ಇಲಾಖೆವಾರು ಮುಖ್ಯಸ್ಥರುಗಳಾದ ಅರೋಗ್ಯ ಇಲಾಖೆ, ಕೃಷಿ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ,, ಶಿಶು ಅಭಿವೃದ್ಧಿ ಇಲಾಖೆ,ಕಂದಾಯ ಇಲಾಖೆಯವರು ತಮ್ಮ ತಮ್ಮ ಇಲಾಖೆಯ ಇಲಾಖಾ ಮಾಹಿತಿ ನೀಡಿದರು. ಗ್ರಾಮಸ್ಥರಿಂದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ  ಜನಾರ್ಧನ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ದಿನೇಶ್ ಪೂಜಾರಿ,, ಸಂದೀಪ್ ಪೂಜಾರಿ,  ಜಯಪ್ರಸಾದ್, ನಿಶಾಂತ್ ರೈ, ಅಬ್ದುಲ್ ರೆಹಿಮಾನ್,,ಜಯಂತಿ, ಮೀನಾಕ್ಷಿ, ಉಮಾವತಿ, ಶೀಲಾ ನಿರ್ಮಲ ವೇಗಸ್, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ್ ಶರ್ಮ ಸ್ವಾಗತಿಸಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ನವೀನ್ ರಾಬರ್ಟ್ ವರದಿ ವಾಚಿಸಿದರು. ಪಂಚಾಯತ್  ಸದಸ್ಯ ಶೀಲಾ ನಿರ್ಮಲ ವೇಗಸ್ ವಂದಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.