ಪ್ರಮುಖ ಸುದ್ದಿಗಳು

ಪೂಜೆ ಮಾಡಿ ಸಮಸ್ಯೆ ಪರಿಹಾರ ಮಾಡಿಸುತ್ತೇನೆ ಎಂದು ಇನ್ಸ್ಟಾಗ್ರಾಂನಲ್ಲಿ ಹಾಕಿ 24.78 ಲಕ್ಷ ರೂ ವಂಚನೆ, ಆರೋಪಿ ಬಂಧನ

ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತತ್‌ಕ್ಷಣದಲ್ಲಿ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ ಸೈಬರ್‌ ವಂಚನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ  ಕನ್ನಡ ಜಿಲ್ಲಾ  ಸೈಬರ್‌  ಅಪರಾಧ ಪೊಲೀಸ್ ಠಾಣೆ ಪೊಲೀಸರು ಆರೋಪಿ ವಾಸುದೇವ ಆರ್ (32) ಎಂಬಾತನನ್ನು ಬಂಧಿಸಿದ್ದಾರೆ.

ಜಾಹೀರಾತು

ಈತ ಬೆಂಗಳೂರಿನ ಸುಂಕದಕಟ್ಟೆಯ ಶ್ರೀನಿವಾಸದಲ್ಲಿ ವಾಸಿಸುತ್ತಿದ್ದು, ಮೂಲತಃ ಯಶವಂತಪುರ ನಿವಾಸಿಯಾಗಿದ್ದಾನೆ. ಆತನಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್, 20,300 ರೂ ನಗದು ವಶಪಡಿಸಿಕೊಳ್ಳಲಾಗಿದ್ದು, ಸ್ವಾಧೀನಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 1.6 ಲಕ್ಷ ರೂ ಆಗಿದೆ.

ಆರೋಪಿಯನ್ನು ನ.4ರಂದು ಬಂಧಿಸಿದ್ದು, 5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

ಜಾಹೀರಾತು
NEWSDESK

www.bantwalnews.comನಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳ, ಲೇಖನಗಳ ವಿಚಾರಗಳಿಗೂ ವೆಬ್ ತಾಣಕ್ಕೂ ಸಂಬಂಧವಿಲ್ಲ. ಇದು ಓದುಗರ ಗಮನಕ್ಕೆ. NOTE: : All opinions regarding the advertisments and articles published in bantwalnews and the related topic are those of the author and advertiser, and this has no relation to BantwalNews. Recommendations and suggestions provided here are left for the readers' consideration.