ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲು ಸ್ವಸಹಾಯ ಸಂಘವೂ ಸೇರಿದೆ.
ಬೆಂಗಳೂರಿನ ಲಲಿತ ಅಶೋಕ ಹೊಟೇಲ್ ನಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಬೆಂಗಳೂರು ಕೌಶಲ್ಯ ಶೃಂಗಸಭೆ-2025ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣ ಪ್ರಕಾಶ್ ಆರ್ ಪಾಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಗೋಳ್ತಮಜಲಿನ ಆಶೀರ್ವಾದ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಶ್ರೀ ಸಿದ್ದಿವಿನಾಯಕ ಮಹಿಳಾ ಸ್ವ-ಸಹಾಯಕ್ಕೆ ಪ್ರಶಸ್ತಿ ನೀಡಿ ಗೌರವಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗೋಳ್ತಮಜಲು ಸ್ವ-ಸಹಾಯ ಸಂಘಕ್ಕೆ ಕೌಶಲ್ಯ ಶೃಂಗಸಭೆ ಪ್ರಶಸ್ತಿ"
Be the first to comment on "ಗೋಳ್ತಮಜಲು ಸ್ವ-ಸಹಾಯ ಸಂಘಕ್ಕೆ ಕೌಶಲ್ಯ ಶೃಂಗಸಭೆ ಪ್ರಶಸ್ತಿ"