MANGALORE CRIME NEWS: ಮಂಗಳೂರು ಸಿಸಿಬಿ ಪೊಲೀಸ್ ಕಾರ್ಯಾಚರಣೆ: ಸಾರ್ವಜನಿಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಆರೋಪ, ಇಬ್ಬರ ಸೆರೆ

ಜಾಹೀರಾತು

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಂಡಿರುತ್ತಾರೆ.

ಪ್ರಕರಣ -1

ನವೆಂಬರ್ 4ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಡ್ಯಾರ್ ಕಣ್ಣೂರು ನಿವಾಸಿ ಅಬ್ದುಲ್ ಸಲಾಮ್ (39) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000 ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣ -2

ನವೆಂಬರ್ 6ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು, ಬೊಳಿಯಾರು ಜಾರದಗುಡ್ಡೆ ನಿವಾಸಿ ಮೊಹಮ್ಮದ್ ನಾಸೀರ್ @ ಶಾಕೀರ್@ ಚಾಕಿ, (28) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000 ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಕಪ್ಪು ಬಣ್ಣದ ಯಮಹಾ ಕಂಪೆನಿಯ ಯಮಹಾ FZ  ಬೈಕ್, ಮೊಬೈಲ್ ಪೋನ್, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,05,000 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ  ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "MANGALORE CRIME NEWS: ಮಂಗಳೂರು ಸಿಸಿಬಿ ಪೊಲೀಸ್ ಕಾರ್ಯಾಚರಣೆ: ಸಾರ್ವಜನಿಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಆರೋಪ, ಇಬ್ಬರ ಸೆರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*