ಕಲ್ಲಡ್ಕ

VANDE MATARAM: ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ವಂದೇ ಮಾತರಂ ಗೀತೆಯ 150ನೇ ಸಂಭ್ರಮಾಚರಣೆ

ಜಾಹೀರಾತು

ಯುವ ಮನಸ್ಸುಗಳಲ್ಲಿ ರಾಷ್ಟ್ರಭಕ್ತಿ ಜಾಗೃತಿಗೊಳಿಸಿದ ಗೀತೆ ವಂದೇ ಮಾತರಂ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

ವಂದೇ ಮಾತರಮ್ ೧೫೦ನೇ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮ ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಪದವಿ ಹಾಗೂ ಪದವಿಪೂರ್ವ ವಿಭಾಗಗಳು ಜೊತೆಯಾಗಿ ನಡೆಸಿದ್ದು, ಈ ಸಂದರ್ಭ, ಕ್ಯಾ. ಚೌಟ ಮಾತನಾಡಿದರು.

ವಂದೇ ಮಾತರಂ ಹಿಂದುತ್ವದ ಶಕ್ತಿಯನ್ನು ಜಾಗೃತಗೊಳಿಸಿದ, ಯುವ ಮನಸ್ಸುಗಳಲ್ಲಿ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸಿದ ಅದ್ವಿತೀಯ ಗೀತೆಯ ೧೫೦ನೇ ವರ್ಷವಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿ ಈ ಗೀತೆಯು ನಮ್ಮ ನೆಲದಲ್ಲಿ ಮತ್ತೆ ಮತ್ತೆ ಮೊಳಗಲಿ ಎಂದು ಸಂಸದ ಚೌಟ ಹೇಳಿದರು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ದೇಶಭಕ್ತಿಯ ಕಿಚ್ಚನ್ನು ಹಚ್ಚಿದ ಗೀತೆಗೆ ನೂರೈವತ್ತನೇ ವರ್ಷವನ್ನು ಆಚರಿಸಿ ಸಾಮೂಹಿಕ ಗಾಯನ ನಡೆಸಲಾಯಿತು. ದೀಪ ಪ್ರಜ್ವಲನ ಹಾಗೂ ಪುಷ್ಪಾರ್ಚನೆಯೊಂದಿಗೆ ಅತಿಥಿಗಳು ಕಾರ್ಯಕ್ರಮದ ಉದ್ಘಾಟನೆಗೈದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಪದಾಧಿಕಾರಿಗಳಾದ ಸುನಿಲ್ ಆಳ್ವ, ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಂಡಲಾಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ವಂದೇಮಾತರಂ ೧೫೦ನೇ ವರ್ಷಾಚರಣೆಯ ಸಂಚಾಲಕರಾದ ಶ್ಯಾಮಲಾ ಕುಂದರ್ ಹಾಗೂ ಸುಜಿತ್, ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲಾಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು. ಪದವಿಪೂರ್ವ ವಿಭಾಗದ ವಿಜ್ಞಾನ ಉಪನ್ಯಾಸಕಿ ಶ್ವೇತಾ ವಂದಿಸಿ, ಕನ್ನಡ ಉಪನ್ಯಾಸಕ ಅಶೋಕ್ ಕಾರ್ಯಕ್ರಮ ನಿರ್ವಹಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲಾಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು. ಪದವಿಪೂರ್ವ ವಿಭಾಗದ ವಿಜ್ಞಾನ ಉಪನ್ಯಾಸಕಿ ಶ್ವೇತಾ ವಂದಿಸಿ, ಕನ್ನಡ ಉಪನ್ಯಾಸಕ ಅಶೋಕ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.