Siddakatte: ಬೆಳೆ ಸಮೀಕ್ಷೆ ಯಶಸ್ವಿ, ರೈತರಿಗೆ ಗರಿಷ್ಠ ಪರಿಹಾರ ದೊರಕಲು ಖಾಸಗಿ ನಿವಾಸಿಗಳ ಸಹಕಾರಕ್ಕೆ ಮಹತ್ವ – ಪ್ರಭಾಕರ ಪ್ರಭು

ಅತಿವೃಷ್ಟಿ, ಅನಾವ್ರಷ್ಟಿ ಹಾಗೂ ನಿರಂತರ ಮಳೆಯಿಂದಾಗಿ ಕೃಷಿಕರ ಅಡಿಕೆ ಬೆಳೆ ಮತ್ತು ಕರಿಮೆಣಸು ಬೆಳೆ ವಿವಿಧ ರೋಗಗಳಿಂದ ಬಾಧಿತವಾಗಿ ರೈತರಿಗೆ ನಷ್ಟ ಉಂಟಾದಾಗ ರೈತರಿಗೆ ಪರಿಹಾರ ನೀಡಿ ಕೃಷಿಕರ ಬಾಳಿಗೆ ವರದಾನ ವಾಗಿರುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಗರಿಷ್ಠ ಪರಿಹಾರ ರೈತರಿಗೆ ದೊರಕಿಸುವಲ್ಲಿ ಕೃಷಿ ಇಲಾಖೆ ಯಿಂದ ನಿಯೋಜಸಲ್ಪಟ್ಟ ಬೆಳೆ ಸಮೀಕ್ಷೆಯಲ್ಲಿ ಖಾಸಗಿ ನಿವಾಸಿಗಳ ಪಾತ್ರವೂ ಪ್ರಮುಖವಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಬಿ. ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಸಂಘದ ವ್ಯಾಪ್ತಿಯ ಒಳಪಟ್ಟ ಗ್ರಾಮಗಳ, ಬೆಳೆ ಸಮೀಕ್ಷೆ ಖಾಸಗಿ ನಿವಾಸಿಗಳನ್ನು ಗೌರವಿಸಿ ಮಾತನಾಡಿದರು.

ಕೆಲವೊಂದು ರೈತರು ತಾವು ಹೊಂದಿರುವ ಜಮೀನಿನಲ್ಲಿರುವ ಬೆಳೆ ಸಮೀಕ್ಷೆಯನ್ನು ತಾವೇ ಮಾಡುತ್ತಿದ್ದು ಬಹುತೇಕ ರೈತರ ಬೆಳೆ ಸಮೀಕೆಯನ್ನು ಕೃಷಿ ಇಲಾಖೆ ಯಿಂದ ಗುರುತಿಸಿಕೊಂಡಿರುವ ಗ್ರಾಮದ ಖಾಸಗಿ ನಿವಾಸಿಗಳು ರೈತರ ತೋಟಗಳಿಗೆ ಹೋಗಿ ಬೆಳೆ ಸಮೀಕ್ಷೆ ಮಾಡಿರುವುದರಿಂದ ಕರಾವಳಿ ಜೆಲ್ಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರ ಬರುತ್ತಿದೆ ಎಂದರು. ಈ ನಿಟ್ಟಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗರಿಷ್ಠ ಪ್ರಮಾಣದಲ್ಲಿ ರೈತರ ಬೆಳೆ ಸಮೀಕ್ಷೆ ಮಾಡಿಸಿ ಹವಾಮಾನ ಆಧಾರಿತ ಬೆಳೆ ವಿಮೆಗೆ ನೋಂದಾಯಿಸಿ ಸಂಘದ ವ್ಯಾಪ್ತಿಯ ರೈತರಿಗೆ ವಾರ್ಷಿಕ ಕೋಟಿಗಟ್ಟಲೆ ಪರಿಹಾರ ದೊರಕುತ್ತಿದ್ದು 2025-26 ನೇ ಸಾಲಿನಲ್ಲಿ  1855 ರೈತರು 2396 ಎಕ್ರೆಗಳಿಗೆ 63 ಲಕ್ಷ ಪಿಮಿಯಂ ಪಾವತಿ ಯಾಗಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ಪುಷ್ಪಲತಾ ಎಸ್. ಆರ್, ,ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ ಹೆಗ್ಡೆ, ಬೆಳೆ ಸಮೀಕ್ಷೆ ಗ್ರಾಮ ನಿವಾಸಿಗಳಾದ ಕಾರ್ತಿಕ್ ನಾಯಕ್ , ಪೂಜಾ, ಭವ್ಯ ಶೋಭಾ, ನಮಿತಾ  ಅಕ್ಷತಾ, ಲಕ್ಷ್ಮಿ, ಭಾರತಿ ಶೆಟ್ಟಿ, ಹೇಮಾವತಿ,ಪುಷ್ಪ  ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Siddakatte: ಬೆಳೆ ಸಮೀಕ್ಷೆ ಯಶಸ್ವಿ, ರೈತರಿಗೆ ಗರಿಷ್ಠ ಪರಿಹಾರ ದೊರಕಲು ಖಾಸಗಿ ನಿವಾಸಿಗಳ ಸಹಕಾರಕ್ಕೆ ಮಹತ್ವ – ಪ್ರಭಾಕರ ಪ್ರಭು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*