ಶಂಭೂರಿನ ಬೊಂಡಾಲ ಜಗನ್ನಾಥ್ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಬೊಂಡಾಲ ಜಗನ್ನಾಥ್ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಸಹಯೋಗದಲ್ಲಿ ಸೋಮವಾರ ಕಲ್ಲಡ್ಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.
ಗ್ರಾಪಂ ಅಧ್ಯಕ್ಷ ಸಂತೋಷ್ ಕುಮಾರ್ ಅಡ್ಡದಪಾದೆ ಅಧ್ಯಕ್ಷತೆ ವಹಿಸಿದ್ದು, ಉಪಾಧ್ಯಕ್ಷೆ ಮೋಹಿನಿ ಉದ್ಘಾಟಿಸಿದರು. ಕಲ್ಲಡ್ಕ ವಲಯದ 29 ಶಾಲೆಗಳ 320 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರುಗಳಾದ ಸವಿತಾ ರಾಮಚಂದ್ರ, ಹೇಮಲತಾ, ಉಶಾಲಾಕ್ಷಿ, ಬಿ ಐ ಆರ್ ಟಿ ಸುರೇಖಾ, ಸಿ ಆರ್ ಪಿ ಗಳಾದ ಸತೀಶ್, ಸುಧಾಕರ್ ಭಟ್, ದುರ್ಗಾಪರಮೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಕಲಾವತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಶಾಂತ, ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಚಂದ್ರಾವತಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗುರುರಾಜ್ ಉಪಸ್ಥಿತರಿದ್ದರು.
ಬೊಂಡಾಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿದರು.ಶಿಕ್ಷಣ ಸಂಯೋಜಕ ರಮಾನಂದ ನೂಜಿಪ್ಪಾಡಿ ಪ್ರಾಸವಿಕವಾಗಿ ಮಾತನಾಡಿದರು. ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ. ವಂದಿಸಿದರು. ಶಿಕ್ಷಕಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು