ತೆಂಗಿನಕಾಯಿ ಕೀಳುವಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಾಳ್ತಿಲ ಗ್ರಾಮದ ಗೋಪಾಲಕೃಷ್ಣ ಪ್ರಭು (56) ನವೆಂಬರ್ 5ರಂದು ತನ್ನ ಮನೆ ಹತ್ತಿರದಲ್ಲಿರುವ ತೆಂಗಿನಮರಕ್ಕೆ ಹತ್ತಿ, ಕಾಯಿ ಕೀಳುವಾಗ ಬಿದ್ದಿದ್ದರು.ಕೂಡಲೇ ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಲಾಗಿತ್ತು.
ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ನ.19ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.