ಬಂಟ್ವಾಳ

ಯುವವಾಹಿನಿಯಿಂದ ಬೈದ್ಯಶ್ರೀ ಕ್ರಿಕೆಟ್: ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಚಾಂಪಿಯನ್

ನವೆಂಬರ್ 22 ಹಾಗೂ 23ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ, ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳೊಂದಿಗೆ ಆಯೋಜಿಸಲ್ಪಟ್ಟ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ಮಾಲಕತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಮೂವತ್ತು ಸಾವಿರ ನಗದು ಹಾಗೂ ಬೈದಶ್ರೀ ಟ್ರೋಫಿ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು.

ಪೃಥ್ವಿರಾಜ್ ಮಣಿಹಳ್ಳ ಮಾಲಕತ್ದದ ಬಿರುವೆರ ಕನಸು ಮಣಿಹಳ್ಳ ದ್ವೀತೀಯ ಪ್ರಶಸ್ತಿ, ವಿಕ್ರಮ್ ಶಾಂತಿ ಕೆರೆಕೋಡಿಗುತ್ತು ಮಾಲಕತ್ದದ ಶ್ರೀ ಗುರು ಫ್ರೆಂಡ್ಸ್ ಬೀಯಪಾದೆ ತೃತೀಯ ಪ್ರಶಸ್ತಿ, ರಂಜಿತ್ ಬಿಸಿರೋಡ್ ಮಾಲಕತ್ದದ ಬಿಲ್ಲವ ವಾರಿಯರ್ಸ್ ಬಂಟ್ವಾಳ ಚತುರ್ಥ ಪ್ರಶಸ್ತಿ ಪಡೆದುಕೊಂಡಿತು

ಜಾಹೀರಾತು

ವೈಯಕ್ತಿಕ ಪ್ರಶಸ್ತಿಗಳು :

ಬಿಲ್ಲವ ಫ್ರೆಂಡ್ಸ್ ಡಿಂಡಿಕೆರೆ ತಂಡದ ಚರಣ್ ಸರಣಿ ಶ್ರೇಷ್ಠ ಪ್ರಶಸ್ತಿ, ಶ್ರೀನಾಥ್ ಪಂದ್ಯಶ್ರೇಷ್ಠ ಪ್ರಶಸ್ತಿ, ಬಿರುವೆರೆ ಕನಸು ಮಣಿಹಳ್ಳ ತಂಡದ ಜೀವನ್ ಅತ್ಯುತ್ತಮ ಎಸೆತಗಾರ, ಜೀವನ್ ಅತ್ಯುತ್ತಮ ಬ್ಯಾಟ್ಸ್‌ಮನ್ ಪ್ರಶಸ್ತಿ ಹಾಗೂ ಬಿಲ್ಲವ ವಾರಿಯರ್ಸ್ ತಂಡದ ಮೋಕ್ಷಿತ್ ಎಮರ್ಜಿಂಗ್ ಪ್ಲೇಯರ್ ಪ್ರಶಸ್ತಿ ಪಡೆದುಕೊಂಡರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ವಿದ್ಯಾ ರಾಕೇಶ್, ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಶ್ರೀ ನಾಲ್ಕೈತ್ತಾಯ ಪಂಜುರ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ದೇಲುಗುತ್ತು ಜಗನ್ನಾಥ್ ನಿರ್ಮಲ್ ಬಂಗೇರ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಿದ್ದಕಟ್ಟೆ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಕಿರಣ್ ಕುಮಾ‌ರ್ ಮಂಜಿಲ, ಮಂಗಳೂರು ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಅನಿಲ್ ಕುಮಾ‌ರ್, ಕಿರಣ್ ಕೋಡಿಕಲ್ ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಉದ್ಯಾಮಿ ಪುರುಷೋತ್ತಮ ಕಾರಾಜೆ, ಮಣಿನಾಲ್ಕೂರು ಬಿಲ್ಲವ ಸಮಾಜ ಸೇವಾ ಸಂಘ, ಅಧ್ಯಕ್ಷ ಸಂಜೀವ ಪೂಜಾರಿ ಕಟ್ಟದಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ನವೀನ್ ಪೂಜಾರಿ ಲೊರೆಟ್ಟೋ,

ಕ್ರೀಡಾ ನಿರ್ದೇಶಕ ಧನುಷ್ ಮದ್ವ, ಸಂಚಾಲಕ ರಂಜಿತ್ ಬಿ.ಸಿ.ರೋಡ್, ನವೀನ್ ಕುಡ್ಮೇರು, ಚಿಂತನ್ ರಾಜ್ ಕಡಂಬಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ನೀಡಿದರು, ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.