ಬಂಟ್ವಾಳ

ಪಾಣೆಮಂಗಳೂರು: ಆಲಡ್ಕದಿಂದ ಮೆಲ್ಕಾರ್ ವರೆಗೆ ರಸ್ತೆ ಗುಂಡಿ ಮುಚ್ಚುವ ಕಾರ್ಯ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯಿಂದ ಆಲಡ್ಕವಾಗಿ ಮೆಲ್ಕಾರ್ ವರೆಗಿನ‌ರಸ್ತೆಯ ಗುಂಡಿಯನ್ನು ಮುಚ್ಚಿ ತೇಪೆ ಕಾರ್ಯ  ಆರಂಭಗೊಂಡಿದೆ.

ಮೆಲ್ಕಾರ್ ನಿಂದ ಪಾಣೆಮಂಗಳೂರುವರೆಗೆ ರಸ್ತೆ ಹೊಂಡಗುಂಡಿಗಳಿಂದ ತುಂಬಿದ್ದು, ಸಂಚಾರ ಮಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಗೆ ಡಾಂಬರು ಮಾಡುವಂತೆ ಇಲ್ಲಿನ ಪುರಸಭಾ ಸದಸ್ಯರಾಗಿದ್ದ ಅಬುಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ ಮನವಿ ಮಾಡಿದ್ದರು.

ಜಾಹೀರಾತು

ಡಾಮರು ಕಾಣದೆ ಹತ್ತಾರು ವರ್ಷಗಳನ್ನು ಕಂಡಿರುವ ಈ ರಸ್ತೆಗೆ ಪೂರ್ತಿ ಮರುಡಾಮರೀಕರಣ ಹಾಗೂ ಎರಡು ಬದಿಯ ಚರಂಡಿಯ ಹೊಳೆತ್ತುವಂತೆ ಮತ್ತು ದುರಸ್ತಿ ಮಾಡುವಂತೆ ಪಾಣೆಮಂಗಳೂರು 24 ವಾರ್ಡ್ ನ ಪರವಾಗಿ ಸದಸ್ಯ ಅಬುಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ ಅವರು ಪಿ.ಡಬ್ಲೂ.ಡಿ.ಇಲಾಖೆಗೆ ಮನವಿ ನೀಡಿದ್ದರು.

ಮನವಿಗೆ ಸ್ವೀಕರಿಸಿದ ಅಧಿಕಾರಿಗಳು ಪೇಟೆಯ ರಸ್ತೆಯ ಪರಿಶೀಲನೆ ನಡೆಸಿ ಬಳಿಕ ಪಾಣೆಮಂಗಳೂರು ಆಲಡ್ಕ ಮೆಲ್ಕಾರ್ ರಸ್ತೆಗೆ ಮರುಡಾಮರೀಕರಣ ಹಾಗೂ ಚರಂಡಿಯ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದ್ದರು.

ಪಾಣೆಮಂಗಳೂರು – ಮೆಲ್ಕಾರ್ ವರೆಗೆ ಸುಮಾರು 1.5 ಕಿಮೀ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಉದ್ದೇಶದಿಂದ ರಸ್ತೆಯ ಗುಂಡಿ ಮುಚ್ಚುವ ಬದಲಿಗೆ ಪೂರ್ತಿ ಡಾಮರೀಕರಣಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಸದ್ಯ ಮನವಿಗೆ ಸ್ಪಂದಿಸಿದ ಇಲಾಖೆ ತಾತ್ಕಾಲಿಕವಾಗಿ ಗುಂಡಿ ಮುಚ್ಚಿ ತೇಪೆ ಹಾಕುವ ಕಾರ್ಯಾ ಅರಂಬಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.