ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವ ಕಣಂತೂರಿನ ಧರ್ಮರಸು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದಲ್ಲಿ ನಡೆಯಿತು.
ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷರಾದ ನವೀನ್ ಚಂದ್ರ ಕಣಂತೂರು ಅಧ್ಯಕ್ಷತೆ ವಹಿಸಿದ್ದರು.
ಧರ್ಮರಸು ತೋಡಕ್ಕುಕ್ಕಿನಾರ್ ದೈವಸ್ಥಾನದ ಆಡಳಿತ ಮೋಕ್ತಸರ ದೇವಿಪ್ರಸಾದ್ ಪೊಯ್ಯತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ, ಬಾಬು ನಾಯ್ಕ, ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಅನುವಂಶಿಕ ಆಡಳಿತ ಮೊಕ್ತೇಸರ ಮಂಜು ಭಂಡಾರಿ, ನಿಕಟಪೂರ್ವ ಅಧ್ಯಕ್ಷ ನವೀನ್ ಪಾದಲ್ಪಾಡಿ, ಬಾಲಕೃಷ್ಣ ಕಾರಂತ, ತಾಲೂಕಿನ ವಲಯಗಳ ಅಧ್ಯಕ್ಷರು,ವಲಯ ಮೇಲ್ವಿಚಾರಕರು ವಿಪತ್ತು ನಿರ್ವಹಣಾ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.