ಕುಕ್ಕಾಜೆಯಲ್ಲಿ ಅಯ್ಯಪ್ಪ ವ್ರತಧಾರಿಗಳ 50ನೇ ವರ್ಷದ ವ್ರತಾಚರಣೆ, ಕೆಂಡಸೇವೆ

ಕುಕ್ಕಾಜೆಯ ಅಯ್ಯಪ್ಪ ಭಕ್ತವೃಂದ, ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರ ಹಾಗೂ ಅಯ್ಯಪ್ಪ ದೀಪೋತ್ಸವ ಸಮಿತಿ, ಮಂಚಿ ಕುಕ್ಕಾಜೆ ಇರಾ ಅಯ್ಯಪ್ಪ ವ್ರತಧಾರಿಗಳ 50ನೆ ವರ್ಷದ ವ್ರತಾಚರಣೆ ಪ್ರಯುಕ್ತ ಅಯ್ಯಪ್ಪ ದೀಪೋತ್ಸವ, ಅಪ್ಪ ಸೇವೆ, ಕೆಂಡಸೇವೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ಸಿದ್ದಿವಿನಾಯಕ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.

ಜಾಹೀರಾತು

ಈ ವಿಷಯವನ್ನು ದೀಪೋತ್ಸವ ಸಮಿತಿ ಅಧ್ಯಕ್ಷ ಮಾಧವ ಮಾವೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ ದೀಪಪ್ರಜ್ವಲನೆ ಮೂಲಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ಬಳಿಕ ಭಜನಾ ಸೇವೆ, ಗಣಹೋಮ, ಗುರುವಂದನಾ ಕಾರ್ಯಕ್ರಮ, ಸಂಜೆ ಭಜನಾ ಮಂಗಲ, ದೀಪೋತ್ಸವ, ಅಪ್ಪ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಧಾರ್ಮಿಕ ಸಭೆ, ಅನ್ನಸಂತರ್ಪಣೆ ಯಕ್ಷಗಾನ ಬಯಲಾಟ, ಕೆಂಡಸೇವೆ ನಡೆಯಲಿದೆ ಎಂದರು. ಸಭಾ ಕಾರ್ಯಕ್ರಮದಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರ ಸಹಿತ ಪ್ರಮುಖರು ಭಾಗವಹಿಸುವರು. ಧಾರ್ಮಿಕ ಉಪನ್ಯಾಸವನ್ನು ಉದಯ ಗುರುಸ್ವಾಮಿ ಮಂಜೇಶ್ವರ ನೀಡುವರು ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರಮುಖರಾದ ರಮೇಶ್ ರಾವ್ ಪತ್ತುಮುಡಿ, ಸಂಜೀವ ಆಚಾರ್ಯ, ಗುರುಸ್ವಾಮಿ ಸದಾಶಿವ ಆಚಾರ್ಯ, ಗುರುಸ್ವಾಮಿ ಕೃಷ್ಣಪ್ಪ ಬೆಳ್ಚಾಡ ಉಪಸ್ಥಿತರಿದ್ದರು

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕುಕ್ಕಾಜೆಯಲ್ಲಿ ಅಯ್ಯಪ್ಪ ವ್ರತಧಾರಿಗಳ 50ನೇ ವರ್ಷದ ವ್ರತಾಚರಣೆ, ಕೆಂಡಸೇವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*