ಬಂಟ್ವಾಳ

ಲೋರೆಟ್ಟೊ ಮಾತಾ ಚರ್ಚ್ ನಲ್ಲಿ ಯೇಸು ಕ್ರಿಸ್ತ ಜಯಂತಿ, ಜ್ಯುಬಿಲಿ ಮಹೋತ್ಸವ

ಲೋರೆಟ್ಟೊ ಮಾತಾ ಚರ್ಚ್ ನಲ್ಲಿ ಯೇಸು ಕ್ರಿಸ್ತ ಜಯಂತಿ, ಜ್ಯುಬಿಲಿ ಮಹೋತ್ಸವ ಗುರುವಾರ ನಡೆಯಿತು. ಸಾಯಂಕಾಲದ ಬಲಿಪುಜೆಯಲ್ಲಿ ನೂರಾರು ಭಕ್ತರು ಯೇಸು ಕ್ರಿಸ್ತರ ಜನನವನ್ನು ಆಚರಿಸಿದರು. ಪ್ರಧಾನ ಧರ್ಮಗುರುಗಳಾಗಿ ವಂ. ಜೋನ್ ಡಿಸೋಜಾ, ಚರ್ಚ್ ಧರ್ಮ ಗುರುಗಳಾದ ವಂ.ಫ್ರಾನ್ಸಿಸ್ ಕ್ರಾಸ್ತಾ, ಲೊರೆಟ್ಟೊ ಅಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ವಂ.ಜೇಸನ್ ಮೋನಿಸ್ ಲೋಕೊದ್ದಾರಕ್ಕಾಗಿ ದರೆಗೆ ಇಳಿದು ಬಂದ ಯೇಸು ಕ್ರಿಸ್ತರ ಜನನದ ಪ್ರಾಮುಖ್ಯತೆಯನ್ನು ಪ್ರವಚನ ಮೂಲಕ ತಿಳಿಸಿದರು.’

ಜಾಹೀರಾತು

ಕ್ರಿಸ್ಮಸ್ ಪ್ರಯುಕ್ತ ಧರ್ಮಗುರುಗಳು ತಮ್ಮ ಸಂದೇಶದಲ್ಲಿ ಮಹೋನ್ನತದಲ್ಲಿ ದೇವರಿಗೆ ಮಹಿಮೆ,ಭೂಲೋಕದಲ್ಲಿ ಸುಮನಸ್ಕರಿಗೆ ಶಾಂತಿ ಬಗ್ಗೆ ಸಂದೇಶ ನೀಡಿದರು. ಚರ್ಚ್ ಅವರಣದಲ್ಲಿ ಎಲ್ಇಡಿ ಪರದೆ ಅಳವಡಿಸಲಾಗಿತ್ತು. ಸಂಬ್ರಮಕ್ಕೆ ಸಹಕರಿಸಿದ ಧಾನಿಗಳಿಗೆ ಗೌರವಪೂರ್ವಕ ವಾಗಿ ಮೇಣದ ಬತ್ತಿಗಳನ್ನು ವಿತರಿಸಲಾಯಿತು. ಯೇಸುಕ್ರಿಸ್ತರ ಜನನವನ್ನು ಸಾರುವ ಸಂದೇಶವನ್ನು ಟ್ಯಾಬ್ಲೋ ಮುಖಾಂತರ ಪೊಳಲಿ ಕೈಕಂಬ ದ್ವಾರ, ಬಂಟ್ವಾಳ ಬೈಪಾಸ್ ಹಾಗೂ ಟಿಪ್ಪು ನಗರ ಹಾಗೂ ಚರ್ಚ್ ಆವರಣದಲ್ಲಿ ಸಮಾಪ್ತಿಗೊಂಡಿತು ಬಲಿ ಪೂಜೆಯ ಬಳಿಕ ಐಸಿವೈಮ್ ಸದಸ್ಯರು ಮನರಂಜನ ಕಾರ್ಯಕ್ರಮವನ್ನು ನೀಡಿದರು. ಏಸುಕ್ರಿಸ್ತರ ಜನ್ಮ ದಿನವನ್ನು ಸಾರುವ ಗೋದಲಿಯನ್ನು ವೈಸಿ ಎಸ್ ಸದಸ್ಯರು ನಿರ್ಮಿಸಿದರು.ಸಂಭ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯನೇತೃತ್ವದಲ್ಲಿ ಶಿಸ್ತುಬದ್ಧವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಧರ್ಮಗುರುಗಳು ಸಹಕರಿಸಿದ ಸರ್ವರರನ್ನು ವಂದಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.