

ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ಭೇಟಿ ಮಾಡಿತು.
Buy Products Online On Bantwala News
[products ids=”58579,57443,57491,58746,58444,58744,58738,58730,58720,58728,58736,58797,58613″ limit=”13″ columns=”13″]
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಡಾ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು.ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಪದ್ಯಾಣ ರಘುರಾಮ ಕಾರಂತ, ಉಭಯ ಸಮಿತಿಗಳ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ ಸುದರ್ಶನ ಹೊಸಮೂಲೆ, ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ,ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಈಶಾನ್ಯ ಪದ್ಯಾಣ ಹಾಗೂ ಪದ್ಯಾಣ ಶಂಕರನಾರಾಯಣ ಭಟ್, ಗಣಪತಿ ಪದ್ಯಾಣ, ಪದ್ಯಾಣ ವೆಂಕಟ್ರಮಣ ಭಟ್, ಡಾ. ಮಹೇಶ ಪದ್ಯಾಣ ಜೊತೆಗಿದ್ದರು.
SHOP AT BANTWALNEWS Click the Link —- https://bantwalnews.com/shop/


Be the first to comment on "Padyana Brahmakalashotsava: ಪದ್ಯಾಣ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ"