ಬಂಟ್ವಾಳ

ದಿವ್ಯಾಂಗರ ಸೇವೆಗೆ ಸಮಾಜದ ಎಲ್ಲ ಸ್ತರದ ಜನರ ಪಾಲ್ಗೊಳ್ಳುವಿಕೆ ಅಗತ್ಯ: ಟಿ.ಜಿ.ರಾಜಾರಾಮ ಭಟ್

ಬಂಟ್ವಾಳ: ಸಮಾಜದ ಎಲ್ಲ ಸ್ತರದ ಜನರು ದಿವ್ಯಾಂಗರ ಸೇವೆಯಲ್ಲಿ ಪಾಲ್ಗೊಳ್ಳುವುದು ಇಂದಿನ ಅಗತ್ಯ.  ದಿವ್ಯಾಂಗ ಮಕ್ಕಳಿಗೆ ಮಾಡುವ ಸೇವೆ ಶ್ರೇಷ್ಠವಾದುದು ಎಂದು ಸಹಕಾರ ರತ್ನ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಹೇಳಿದ್ದಾರೆ.

ಬಿ.ಸಿ.ರೋಡಿನಲ್ಲಿ ನಡೆದ ವಿಕಾಸಂ ಸೇವಾ ಫೌಂಡೇಶನ್ ವತಿಯಿಂದ ವಿಕಾಸಂ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ರಕ್ತ ಮತ್ತು ಹಣ ಒಂದು ಕಡೆ ಹೆಪ್ಪುಗಟ್ಟಿನಿಂತರೆ ಅದು ಅಪಾಯ. ಹಣ ಸೀಮಿತ ಕೈಗಳಲ್ಲಿ ಮಾತ್ರ ಕ್ರೋಢೀಕರಣಗೊಂಡರೆ ಅದು ಸಮಾಜಕ್ಕೆ ಅಪಾಯ. ಧನವು ದಿವ್ಯಾಂಗರ ಸೇವೆಗೆ ಬಳಕೆಯಾದರೆ ದಿವ್ಯಾಂಗರು ಸಬಲರಾಗುವುದರ ಜೊತೆಗೆ ಸಮಾಜವೂ ಸ್ವಸ್ಥವಾಗುತ್ತದೆ ಎಂದರು. ಈ ಸಂದರ್ಭ ಅವರನ್ನು ಗೌರವಿಸಲಾಯಿತು.

ಜಾಹೀರಾತು

ಮುಖ್ಯ ಅತಿಥಿಯಾಗಿ ಎಚ್.ಪಿ.ಇಂಡಿಯಾ ಸಂಸ್ಥೆಯ ಟ್ಯಾಲೆಂಟ್ ಅಕ್ವಿಸಿಶನ್ ಮುಖ್ಯಸ್ಥರಾದ ದಿಲೀಪ್ ಚಂದ್ರ ಮಾತನಾಡಿ ವಿಕಾಸಂ ಸೇವಾ ಫೌಂಡೇಶನ್ ಸಂಸ್ಥೆ ಮಾಡುತ್ತಿರುವ ದಿವ್ಯಾಂಗರ ಸೇವೆಯಲ್ಲಿ ಎಚ್ ಪಿ ಸಂಸ್ಥೆ ಸದಾ ಸಹಭಾಗಿಯಾಗಲಿದೆ ಎಂದು ಹೇಳಿದರು. ಎಚ್ ಪಿ ಸಂಸ್ಥೆಯ ಇಂಕ್ಲೂಸಿವ್ ಆಂಡ್ ಬಿಲಾಂಗಿಂಗ್ ಯೋಜನೆಯಡಿಯಲ್ಲಿ ವಿಕಾಸಂ ನಲ್ಲಿ ತರಬೇತಿ ಪಡೆಯುತ್ತಿರುವ ದಿವ್ಯಾಂಗ ಮಕ್ಕಳ ಶಿಕ್ಷಣದ ಉದ್ದೇಶದಿಂದ ಕಂಪ್ಯೂಟರ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. 

ಹೋಟೆಲ್ ವಿವಾಂತ, ಮಂಗಳೂರು ಇಲ್ಲಿನ ಮಾನವಸಂಪನ್ಮೂಲ ಮುಖ್ಯಸ್ಥರಾದ ರೇಖಾ ಸಂಜೀವ್ ಮಾತನಾಡಿ   ಖಾಸಗಿ ವಲಯದ ಉದ್ಯೋಗದಾತರೂ ದಿವ್ಯಾಂಗರಿಗೆ ಉದ್ಯೋಗವನ್ನು ಒದಗಿಸಬೇಕು ಎಂದು ಹೇಳಿದರು.

ಉದ್ಯಮಿ ರೋಷನ್ ರೈ ಮಾತನಾಡಿ ನಿಸ್ವಾರ್ಥ ಸೇವೆಯನ್ನು ಮಾಡುವಾಗ ಹಲವು ಅಡೆತಡೆಗಳು ಬರುವುದು ಸಹಜವಾದರೂ,ಒಳ್ಳೆಯ ಉದ್ದೇಶ ಸಾಧನೆಗಾಗಿ  ಅದನ್ನೆಲ್ಲಾ ಎದುರಿಸಬೇಕಾಗಿದೆ ಎಂದು ಹೇಳಿದರು.

ಎಚ್ ಪಿ ಸಂಸ್ಥೆಯ ದಿಲೀಪ್ ಚಂದ್ರ, ಪ್ರತಾಪ್ ಕುಮಾರ್ , ವರುಣ್ ಆರ್, ರಚನ್ ಶೆಟ್ಟಿ ಹಾಗೂ ವಿನಯ್ ಕುಮಾರ್ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯ ದ ಬಗ್ಗೆ ತರಬೇತಿ ಕೈಗೊಂಡರು.  

ವಿಕಾಸಂ ಸಂಸ್ಥೆಯ ಸಹ ಸಂಸ್ಥಾಪಕ ಧರ್ಮಪ್ರಸಾದ್ ರೈ ಅಧ್ಯಕ್ಷತೆ ವಹಿಸಿದ್ದರು. ವಿಕಾಸಂ ಸಂಸ್ಥೆಯ ಸಹಸಂಸ್ಥಾಪಕ ಗೋಪಾಲ್ ಗೋವಿಂತೋಟ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇನ್ನೋರ್ವ ಸಹ ಸಂಸ್ಥಾಪಕ ಗಣೇಶ್ ಭಟ್ ವಾರಣಾಸಿ ಅತಿಥಿಗಳನ್ನು ಸ್ವಾಗತಿಸಿದರು. ನವ್ಯಾ ಕಾರ್ಯಕ್ರಮ ನಿರೂಪಿಸಿದರು.  ಈ ಸಂದರ್ಭ ವಿಕಾಸಂ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ದಿವ್ಯಾಂಗ ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಜರಗಿತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.