ಎಐಎಲ್ಎಜೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಲೀಗಲ್ ಪ್ರೆಂಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ಬಿ.ಸಿ.ರೋಡಿನಲ್ಲಿ ವಿಚಾರಸಂಕಿರಣ

ರಾಜಕೀಯ ನಾಯಕರನ್ನು ಹೀರೋಗಳನ್ನಾಗಿ ಮಾಡಿ ಭಕ್ತಿ ತೋರಿಸಬೇಡಿ. ಇದು ಸಂವಿಧಾನಕ್ಕೆ ಸವಾಲು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೈಕೋರ್ಟ್ ವಕೀಲರಾದ ಕ್ಲಿಪ್ಟನ್ ಡಿ’ ರೊಜಾರಿಯೋ ಹೇಳಿದರು.

ಅವರು ಎಐಎಲ್ಎಜೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಲೀಗಲ್ ಪ್ರೆಂಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕ  ಬಿ ಸಿ ರೋಡಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ‘ಸಂವಿಧಾನದ ಮುಂದಿರುವ ಸವಾಲುಗಳು’ ಎಂಬ ವಿಚಾರವಾಗಿ ಮಾತನಾಡಿದರು.

“ಸಂವಿಧಾನವನ್ನು ಎಲ್ಲರೂ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅದೇ ರೀತಿಯ ಶಿಕ್ಷಣ ನಮ್ಮ ಸಮಾಜದಲ್ಲಿ ಬೇಕಾಗಿದೆ. ಸಮಾಜದಲ್ಲಿ ಬಡವ-ಶ್ರೀಮಂತ ಎಂಬ ಭೇದ-ಭಾವ, ಜಾತಿ ಶೋಷಣೆ, ಧರ್ಮ-ಲಿಂಗ ತಾರತಮ್ಯ ಇಲ್ಲದ ಸಮಾಜ ಇಂದು ನಿರ್ಮಾಣವಾಗಬೇಕಿದೆ. ಇದು ಇಂದಿನ ಹಿರಿಯರು ಮುಂದಿನ ಸಮಾಜಕ್ಕೆ ನೀಡಬಹುದಾದ ಕೊಡುಗೆ” ಎಂದು ಒತ್ತಿ ಹೇಳಿದರು.

ಜಾಹೀರಾತು

“ದೇಶದ ಪ್ರಜಾಪ್ರಭುತ್ವ ‘ತುರ್ತು ಪರಿಸ್ಥಿತಿ’ ಎಂಬ ಅತ್ಯಂತ ಕರಾಳ ದಿನಗಳನ್ನು ಎದುರಿಸಿತ್ತು. ಸುಪ್ರೀಂ ಕೋರ್ಟ್ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಉಂಟಾಗುವ ತಿದ್ದುಪಡಿ ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು. ಹೀಗಾಗಿ ಸಂವಿಧಾನ ಬದುಕಿ ಉಳಿದಿದೆ” ಎಂದರು.ಹಿರಿಯ ವಕೀಲರಾದ ಮನೋರಾಜ್ ರಾಜೀವ ಅವರು ಸಂವಿಧಾನದ ಮಂದಿರುವ ಸವಾಲುಗಳನ್ನು ಜನತೆ ಹೇಗೆ ಎದುರಿಸಬೇಕು ಎಂದು ವಿವರಿಸಿದರು. ಎಐಎಲ್ಎಜೆ ಕೇಂದ್ರ ಸಮಿತಿ ಸದಸ್ಯರಾದ  ಅವನಿ ಚೋಕ್ಷಿ ,ಯುವ ವಕೀಲರಾದ ಅಬ್ದುಲ್ ಜಲೀಲ್ ಎನ್ . ಹೈಕೋರ್ಟ್ ವಕೀಲರಾದ ಸಂದ್ಯಾ ಪ್ರಭು ಮಾತನಾಡಿದರು. ಹಿರಿಯ ವಕೀಲರಾದ ಶೋಭಲತಾ ಸುವರ್ಣ, ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಸುರೇಶ್ ಪೂಜಾರಿ, ಹಿರಿಯ ವಕೀಲರಾದ ಹಾತಿಮ್ ಅಹಮದ್,  ಶ್ರೀಧರ್ ಪೈ, ಯುವ ವಕೀಲರಾದ ಮೋಹನ್ ಕುಮಾರ್ ಕಡೇಶಿವಾಲ್ಯ,  ಉಮಾಕರ್ ಬಂಗೇರ ,ಎಐಎಲ್ ಎ ಜೆ ಉಪಾಧ್ಯಕ್ಷರಾದ ಮಂಜುನಾಥ್ ಪೂಜಾರಿ, ಎಐಎಲ್ ಎಜೆ ಜಿಲ್ಲಾ ಕೋಶಧಿಕಾರಿ  ಮಹಮ್ಮದ್  ಮುಂಝಿರ್,   ನವೀನ್ ತಾವೋ , ಲೀಗಲ್ ಪ್ರೆಂಡ್ಸ್ ಜಿಲ್ಲಾ ಘಟಕದ ಮುಖಂಡರಾದ ಉಮ್ಮರುಲ್ ಫಾರೂಕ್ ನೆಲ್ಯಾಡಿ  ಸಿರಾಜುದ್ದೀನ್ ಉಪ್ಪಿನಂಗಡಿ ,  ಎಸ್ .ಜಿ ಅಫ್ರೀಝ್ ಯುವ  ವಕೀಲರಾದ  ಮಹಮ್ಮದ್ ಲುಕ್ಮಾನ್ , ಕಾರ್ತಿಕ್ ಎಂ. ಪ್ರಜ್ವಲ್ ಪುತ್ತೂರು ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನದ ಪೀಠಿಕೆಯ ಮೇಲೆ ಪರದೆಯನ್ನು ಎಳೆಯುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಲಾಯಿತು.ಯುವ ಮುಖಂಡರಾದ ಸತೀಶ್ ಅರಳ ಸಂವಿಧಾನ ದ ಪೀಠಿಕೆಯನ್ನು ಹಾಡಿದರು.

ಹಿರಿಯ ವಕೀಲರಾದ ಚಂದ್ರಶೇಖರ್ ರಾವ್ ಪುಂಚಮೆ , ಹಾಗೂ ಯುವ ವಕೀಲರಾದ ಮಹಮ್ಮದ್ ‌ಗಝಾಲಿ‌ ಕಾರ್ಯಕ್ರಮ ನಿರೂಪಿಸಿದರು. ಎಐಎಲ್ ಜೆ ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಅಸ್ಫಾಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೊನೆಯಲ್ಲಿ ಎಐಎಲ್ ಎಜೆ ಜಿಲ್ಲಾ ಅಧ್ಯಕ್ಷರಾದ ತುಳಸೀದಾಸ್.ಆರ್ ಮಾತನಾಡಿ ಧನ್ಯವಾದ ಸಲ್ಲಿಸಿದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಐಎಲ್ಎಜೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಲೀಗಲ್ ಪ್ರೆಂಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ಬಿ.ಸಿ.ರೋಡಿನಲ್ಲಿ ವಿಚಾರಸಂಕಿರಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*