ಬಿ. ಸಿ. ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರುವಿನ ಲ್ಲಿ ಕ್ರಾಸಿಂಗ್ ನೀಡುವಂತೆ ಆಗ್ರಹಿಸಿ ಜ.16ರ ಶುಕ್ರವಾರ ಸೂರಿಕುಮೇರು ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮಾಣಿ ಗ್ರಾಮ ಪಂಚಾಯತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಸೂರಿಕುಮೇರು ಜಂಕ್ಷನ್ ನ ಸ್ವಲ್ಪ ಹಿಂದೆ ಅಥವಾ ಮುಂದೆ ಕ್ರಾಸಿಂಗ್ ನೀಡಬೇಕು. ಒಂದು ವೇಳೆ ಸಮಸ್ಯೆಗೆ ಹೆದ್ದಾರಿ ಇಲಾಖೆ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ಭಾಗದಲ್ಲಿ ಶಾಲೆ, ದೇವಸ್ಥಾನ, ಮಸೀದಿ, ಚರ್ಚ್ ಗಳಿದ್ದು ಸಾರ್ವಜನಿಕರಿಗೆ ಕಷ್ಟವಾಗುತ್ತಿದ್ದು, ಧಾರ್ಮಿಕ ,ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೇಡಿಕೆ ಮುಂದಿಟ್ಟು ಹೆದ್ದಾರಿ ಇಲಾಖೆಗೆ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಈ ಸಂದರ್ಭ ಹೆದ್ದಾರಿ ಇಲಾಖೆಯ ರೆಸಿಡೆನ್ಶಿಯಲ್ ಇಂಜಿನಿಯರ್ ಬಿನೋದ್ ಮಾತನಾಡಿ ಕೂಡಲೇ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಹೆದ್ದಾರಿಯ ಅಸಿಸ್ಟೆಂಟ್ ಇಂಜಿನಿಯರ್ ಚಿದಾನಂದ, ಮಾಣಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯಾದ ಮೆಲ್ವಿನ್ ಮಾರ್ಟಿಸ್, ಪ್ರೀತಿ ಡಿಕುನ್ಹಾ, ಬರಿಮಾರು ಗ್ರಾಮ ಪಂಚಾಯತಿ ಸದಸ್ಯ ಹರಿಕೃಷ್ಣ ಬಿ.ಎಸ್., ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಸಲೀಂ ಬರಿಮಾರು ಹಾಗೂ ಬರಿಮಾರು ಮತ್ತು ಮಾಣಿ ಗ್ರಾಮಸ್ಥರು ಉಪಸ್ಥಿತರಿದ್ದರು.



Be the first to comment on "ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿನಲ್ಲಿ ಕ್ರಾಸಿಂಗ್ ಗೆ ಒತ್ತಾಯಿಸಿ ಪ್ರತಿಭಟನೆ"