ವಿಟ್ಲ

ಒಡಿಯೂರು: ಯೋಧರಿಗೆ ಗೌರವಾರ್ಪಣೆ, ಸೈನಿಕರ ತ್ಯಾಗ ಮನೋಭಾವ ಪ್ರಶಂಸನೀಯ: ಒಡಿಯೂರು ಶ್ರೀಗಳು

ಶಿಸ್ತು ಸಂಯಮ ಬದುಕಿನ ಕಣ್ಣುಗಳಂತೆ. ಸೈನಿಕರ ಸೇವೆ ಅಪರ್ಣಾ ಮನೋಭಾವ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿ ಆಗಿದೆ. ಸೈನಿಕ ತ್ಯಾಗ ಮನೋಭಾವ ಪ್ರಶಂಸನೀಯ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ಒಡಿಯೂರಿನಲ್ಲಿ  ಮಂಗಳವಾರ ನಡೆದ ‘ವಂದೇ ಮಾತರಂ’ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ನಿವೃತ್ತ ಯೋಧರಿಗೆ ತುಳುಸಿರಿ ಪ್ರಶಸ್ತಿ ನೀಡಿ ಅನುಗ್ರಹ ಸಂದೇಶ ನೀಡಿದರು.

ದೇಶದ ರಕ್ಷಕರಾದ ಸೈನಿಕರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಮಾತೃಭಾಷೆಯನ್ನು ಉಳಿಸಿಕೊಂಡು ರಾಷ್ಟ್ರದ ರಕ್ಷಣೆಯಲ್ಲಿ ಜೋಡಿಸಿಕೊಳ್ಳೋಣ ಎಂದು ಶ್ರೀಗಳು ತಿಳಿಸಿದರು.

ಜಾಹೀರಾತು

ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿ ಶುಭ ಹಾರೈಸಿದರು. ಭಾರತೀಯ ಜನತಾ ಪಕ್ಷದ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ದುರ್ಗಾಪ್ರಸಾದ್ ರೈ ಕುಂಬ್ರ ಅತಿಥಿಗಳಾಗಿದ್ದರು. ತುಳು ಸಾಹಿತ್ಯ ಸಮ್ಮೇಳನೊದ ಪ್ರಧಾನ ಸಂಚಾಲಕ ಡಾ ವಸಂತ ಕುಮಾರ್ ಪೆರ್ಲ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮ್ಮೇಳನಾಧ್ಯಕ್ಷ  ಕದ್ರಿ ನವನೀತ ಶೆಟ್ಟಿ, ತುಳು ಭಾಷೆ ಮತ್ತು ತುಳು ಶಬ್ದ ಭಂಡಾರವನ್ನು ಉಳಿಸಿಕೊಳ್ಳುವ ಅಗತ್ಯ ಇದೆ. ಕಂಬಳ,  ನೇಮ ,ಜಾತ್ರೆ ಬಗ್ಗೆ ಸೇರುವ ಜನರು ಕಂಡಾಗ ಯುವಜನತೆ ತುಳು ಸಂಸ್ಕೃತಿಯ ಬಗ್ಗೆ ಆಸಕ್ತಿ ಹೊಂದಿರುವುದು ಕಾಣಿಸುತ್ತದೆ ಎಂದರು.

ಸಮಾರಂಭದಲ್ಲಿ ನಿವೃತ್ತ ಯೋಧರಾದ ಎ.ಕೆ. ಜಯಚಂದ್ರನ್ ಮಂಗಳೂರು, ರಾಜೇಶ್ ಹೊಳ್ಳ ಮಂಗಳೂರು, ಡಿ. ಚಂದಪ್ಪ ಮೂಲ್ಯ, ನಿವೃತ್ತ ಡೆಪ್ಯೂಟಿ ಕಮಾಂಡೆಂಟ್, ಬಿ.ಎಸ್.ಎಫ್., ದೀಪಕ್ ಅಡ್ಯಂತಾಯ ಮಂಗಳೂರು, ಸುಧೀರ್ ಪೈ ಮಂಗಳೂರು, ಪೂವಪ್ಪ ಪೂಜಾರಿ, ಅಪ್ಪು ಶೆಟ್ಟಿ ಮಂಗಳೂರು, ಜನಾರ್ದನ, ಎಂ.ಬಿ. ರಾಜ, ಪುರುಷೋತ್ತಮ ಕೆ.ಸಿ.,  ಭಾಸ್ಕರ ಮುಲ್ಕಿ, ಸುಂದರ ಗೌಡ ಕೆ. ನಡುಬೈಲ್, ವಸಂತ ಗೌಡ ದೇವಸ್ಯ, ನಾಗಪ್ಪ ಗೌಡ ಕೇಪುಳು,  ಸುಂದರ ಕೆ. ನೈತ್ತಾಡಿ,  ಪುರಂದರ ಡಿ. ಚಂದಳಿಕೆ,  ಚಂದ್ರಶೇಖರ ಗೌಡ ಎ. ಪಡ್ನೂರು, ವಸಂತಕುಮಾರ್ ಬಿ. ಪುತ್ತೂರು,  ವೆಂಕಪ್ಪ ಗೌಡ ಪುಣಚ, ಬಾಲಕೃಷ್ಣ ಗೌಡ ಮಂಗಲಪದವು, ಚಂದ್ರ ಕೆ. ವಿಟ್ಲ, ಬಾಲಕೃಷ್ಣ ರೈ ಗೊಳ್ತಮಜಲು, ಕುಶಾಲಪ್ಪ ಗೌಡ ವಿಟ್ಲ,  ಧನಂಜಯ ಗೌಡ ಮಂಗಲಪದವು, ಎಡ್ವಿನ್ ರಾಡ್ರಿಗಸ್ ವಿಟ್ಲ,  ದಾಸಪ್ಪ ಪೂಜಾರಿ ಮಂಗಲಪದವು, ಅಶೋಕ ವಿಟ್ಲ,  ಕರಿಬಸಪ್ಪ ಬಿ.ಸಿ.ರೋಡ್,  ಐವಾನ್ ಮೆನೆಜಸ್, ಬಿ.ಸಿ.ರೋಡ್,  ರಮೇಶ್ ಕನ್ಯಾನ, ಸೂರ್ಯಕಾಂತ್ ಹಾಗೂ ಮೋಹನದಾಸ ಅವರನ್ನು ‘ತುಳುಸಿರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶೇಖರ ಶೆಟ್ಟಿ ಬಾಯಾರು ಸ್ವಾಗತಿಸಿದರು. ಪ್ರವೀಣ ಕುಮಾರ್ ವಂದಿಸಿದರು. ವಾರುಣಿ ನಾಗರಾಜ ಆಚಾರ್ಯ ಮಂಗಳಾದೇವಿ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಗಂಟೆ ೬ರಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು

ಪೇಂಟೆದ ಪೊರ್ಲು ಹಳ್ಳಿದ ತಿರ್ಲ್ ವಿಚಾರಗೋಷ್ಠಿ

ರಾಷ್ಟ್ರೀಯತೆ-ದೇಸೀಯತೆ ಎಂಬ ವಿಚಾರಗೋಷ್ಠಿಯಲ್ಲಿ ಪೇಂಟೆದ ಪೊರ್ಲು ವಿಚಾರದ ಬಗ್ಗೆ  ಶ್ರೀಕಾಂತ್ ಶೆಟ್ಟಿ ಕಾರ್ಕಳ, ಹಳ್ಳಿದ ತಿರ್ಲ್ ವಿಚಾರದ ಬಗ್ಗೆ ವಿಜೇತ್ ಶೆಟ್ಟಿ ಮಂಜನಾಡಿ ವಿಚಾರ ಮಂಡಿಸಿದರು. ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ವಸಂತ ಕುಮಾರ ಪೆರ್ಲ ಅಧ್ಯಕ್ಷತೆ ವಹಿಸಿದ್ದರು. ಮಧ್ಯಾಹ್ನ ಎರಡು ಗಂಟೆಗೆ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಜರಗಿತು. 26  ಕವಿಗಳು ಭಾಗವಹಿಸಿದ್ದರು. ಗೀತಾ ಲಕ್ಷ್ಮೀ ಶ್ ಕವಿಗೋಷ್ಠಿಯನ್ನು ನಿರೂಪಿಸಿದರು. ಸಮ್ಮೇಳನದ ಉದ್ಘಾಟನೆಗೆ ಮೊದಲು ವಂದೇ ಮಾತರಂ ಗೀತೆಗೆ ಸುಳ್ಯದ ನೂಪುರ ನಾದ ಕಲಾತಂಡದಿಂದ ನೃತ್ಯ  ಹಾಗೂ ಯದ್ವಿ ರೈ ಅವರಿಂದ ದೇವಿಸ್ತುತಿ ನೃತ್ಯ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.