Uncategorized

ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜಾತ್ರಾ ಮಹೋತ್ಸವ, ಬ್ರಹ್ಮರಥೋತ್ಸವ – ಫೆ.3ರಿಂದ 7ವರೆಗೆ — Details

press meet

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆ.3ರಿಂದ 7ವರೆಗೆ ನಡೆಯಲಿದೆ.

ಆಡಳಿತ ಮೊಕ್ತೇಸರ ಸುಧಾಕರ ಶೆಣೈ ಮರೋಳಿ ಶುಕ್ರವಾರ ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರತಿ ದಿನವೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿದ್ದು, 6ರಂದು ಸಂಜೆ ಸುಡುಮದ್ದು ಪ್ರದರ್ಶನದೊಂದಿಗೆ ಬ್ರಹ್ಮರಥೋತ್ಸವ ನಡೆಯಲಿದೆ. ಕ್ಷೇತ್ರವು ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮುದಾಯದ ಭಕ್ತಿಯ ಆರಾಧ್ಯ ಕೇಂದ್ರವಾಗಿದ್ದು, 1990ರಲ್ಲಿ ನೂತನವಾಗಿ ನಿರ್ಮಾಣಗೊಂಡ ಗರ್ಭಗುಡಿಯಲ್ಲಿ ಬ್ರಹ್ಮಕಲಶೋತ್ಸವ, 1997ರಲ್ಲಿ ಗಣಪತಿ ಪ್ರತಿಷ್ಠೆ, ನೂತನ ಕಲ್ಯಾಣ ಮಂಟಪದ ಕೆಲಸಗಳು, 2004ನೇ ಇಸವಿಯಲ್ಲಿ ಶಿಲಾಮಯ ವೆಂಕಟರಮಣ ಮೂರ್ತಿಯ ಪ್ರತಿಷ್ಠೆ, 2018ರಲ್ಲಿ ಕ್ಷೇತ್ರಕ್ಕೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಸಲಾಯಿತು. 2023ರಲ್ಲಿ ಸಂಕಲ್ಪಗೊಂಡು 2025ರಲ್ಲಿ 75 ಲಕ್ಷ ರೂ ವೆಚ್ಚದಲ್ಲಿ ಬ್ರಹ್ಮರಥ ಸಮರ್ಪಣೆಯೂ ಆಗಿದ್ದು, ಕಳೆದ ಫೆ.6ರಂದು ಸಾವಿರಾರು ಭಕ್ತರ ಸಮ್ಮುಖ ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ನಡೆದಿತ್ತು ಎಂದವರು ಮಾಹಿತಿ ನೀಡಿದರು.

ಜಾಹೀರಾತು

ಈ ಸಂದರ್ಭ ಆನುವಂಶಿಕ ಮೊಕ್ತೇಸರ ವೆಂಕಟ್ರಾಯ ಶೆಣೈ ಕಂಟಿಕ, ಮೊಕ್ತೇಸರರಾದ ಶಾಂತಾರಾಮ ಶೆಣೈ ಕಂಟಿಕ, ಡಾ. ವಿಜಯಲಕ್ಷ್ಮೀ ಡಿ. ನಾಯಕ್ ನೇರಳಕೋಡಿ, ರಾಜೀವ ಡಿ.ಎಸ್. ದರ್ಬೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.