ಬಿ.ಸಿ.ರೋಡಿನಲ್ಲಿರುವ ಬಂಟ್ವಾಳದ ಸರಕಾರಿ ನೌಕರ ಭವನದಲ್ಲಿ ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಜಗದೀಶ್ ರೈ ತುಂಬೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುರೇಖ ಪ್ರಸಾದ್ ಸಜಿಪ ಮುನ್ನೂರು ಆಯ್ಕೆಯಾದರು. ಸಂಘದ ಕೋಶಾಧಿಕಾರಿಯಾಗಿ ಸರಕಾರಿ ಪ್ರೌಢ ಶಾಲೆ ನಾವೂರು ದೈಹಿಕ ಶಿಕ್ಷಣ ಶಿಕ್ಷಕರಾದ ಚಿನ್ನಪ್ಪ.ಕೆ ಜಾಲ್ಸೂರು ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಾಜೇಂದ್ರ ರೈ ಅಳಿಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿ ಆಶಾ ನಾಯಕ್ , ಶಿವಪ್ರಸಾದ್ ರೈ, ನವೀನ್ ಪಿ ಎಸ್. ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಣ ಶಿಕ್ಷಕರ ಅಧ್ಯಕ್ಷರಾದ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು ,ಜನಾರ್ದನ ಆಚಾರ್ಯ ವಂದಿಸಿದರು
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)