ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರನ್ನು, ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಸ್ವಾಗತ ಸಮಿತಿಯ ಸಂಚಾಲಕರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ ಆದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯವರಾದ ಕೃಷ್ಣ ಮಾಣಿಪ್ಪಾಡಿ, ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅರವಿಂದ ಪದ್ಯಾಣ ಅವರು ಜೊತೆಗಿದ್ದರು.