ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಮಾತುಕತೆ ನಡೆಸಿದರು.
ಬಂಟ್ವಾಳ: ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಮಾತುಕತೆ ನಡೆಸಿದರು. ಹಿರಿಯ ಕಾಂಗ್ರೆಸ್ ಮುಖಂಡರೂ ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಪೂಜಾರಿ ಅವರ ಮಾರ್ಗದರ್ಶನ ಪಡೆದ ಶಿವಕುಮಾರ್, ಪ್ರಸಕ್ತ ರಾಜಕೀಯ ವಿಚಾರಗಳ ಸಹಿತ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಪಕ್ಷ ಪ್ರಮುಖರಾದ ವಿನಯ ಕುಮಾರ್ ಸೊರಕೆ, ಹರೀಶ್ ಕುಮಾರ್, ಆರ್. ಪದ್ಮರಾಜ್, ಇನಾಯತ್ ಆಲಿ, ಮಮತಾ ಗಟ್ಟಿ, ಮೊಹಮ್ಮದ್ ನಲಪಾಡ್, ಇಬ್ರಾಹಿಂ ನವಾಜ್, ಬೇಬಿ ಕುಂದರ್ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.