?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಛತ್ರಪತಿ ಶಿವಾಜಿ ಜಯಂತಿ ಆಚರಣೆ ನಡೆಯಿತು.
ಈ ಸಂದರ್ಭ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಶಿವಾಜಿ ಮಹಾರಾಜರು ನಮ್ಮ ದೇಶದ ಇತಿಹಾಸದ ಪರಂಪರೆಯನ್ನು ಜಾಗೃತಿಗೊಳಿಸುವಂತೆ ಮಾಡಿದವರು. ಶಿವಾಜಿ ತಾಯಿ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದಕ್ಕೆ ಆದರ್ಶವಾಗಿದ್ದರೆ, ರಾಷ್ಟ್ರದ ರಕ್ಷಣೆ, ನಮ್ಮ ಸ್ವಾಭಿಮಾನದ ಸಂರಕ್ಷಣೆಯನ್ನು ಮಾಡುವುದಕ್ಕೆ ಮೊದಲ ಆದ್ಯತೆ ನೀಡಿದವರು ಛತ್ರಪತಿ ಶಿವಾಜಿ. ಸಮಾಜ ನಿರ್ಮಾಣ ಕಾರ್ಯವನ್ನು ಅವರು ಮಾಡಿದ್ದಾರೆ ಎಂದರು.
ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಪ್ರಾಸ್ತಾವಿಕವಾಗಿ ಮಾತನಾಡಿ, ಜಯಂತಿ ಆಚರಣೆ ಆಶಯವನ್ನು ವಿವರಿಸಿದರು. ಉಪತಹಸೀಲ್ದಾರ್ ಶಿವಪ್ರಸಾದ್, ಕಂದಾಯ ನಿರೀಕ್ಷಕ ವಿಜಯ್ ಆರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್ ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿ ಹಾಜರಿದ್ದರು.
| VBGRAMG ಕುರಿತ ಜನಜಾಗೃತಿ ಹಿನ್ನೆಲೆ ಬಿಜೆಪಿಯಿಂದ ನಡೆದ ಪಾದಯಾತ್ರೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆ (more…)