ಬಂಟ್ವಾಳ ಯೋಜನಾ ಕಚೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ಹಾಗೂ ಬೆಳ್ತಂಗಡಿಯ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ವತಿಯಿಂದ ಸಾರಿ ಗೊಂಡೆ ಹಾಗು ಫೋಲ್ಡಿಂಗ್ ತರಬೇತಿ ಉದ್ಘಾಟನೆ ನಡೆಯಿತು.
ಯೋಜನೆಯ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಐದು ದಿನಗಳ ಕಾಲ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಜಿಲ್ಲಾ ನಿರ್ದೇಶಕ ಡಿ. ದಿನೇಶ್ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಕ್ಕೆ ಉತ್ತಮ ಸೇವೆ ನೀಡುತ್ತಿದೆ ಎಂದರು. ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಉಪನ್ಯಾಸಕಿ ಧರಣಿ ಉಪಸ್ಥಿತರಿದ್ದರು.
ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ, ತರಬೇತಿ ಶಿಕ್ಷಕಿ ವಿಜಯ, ಕೋಣಾಜೆ ಒಕ್ಕೂಟದ ವಲಯ ಅಧ್ಯಕ್ಷ ರವಿ ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಕಾರ್ಯಕ್ರಮ ನಿರ್ವಹಿಸಿದರು. ಸೇವಾಪ್ರತಿನಿಧಿ ಉಷಾ ಉಪಸ್ಥಿತರಿದ್ದರು
ಪೊಸಳ್ಳಿ, ದೈಪಲ, ಕಾಮಾಜೆ, ಕುಲಾಲರಮಠ ಸಂಪರ್ಕ ರಸ್ತೆಗೆ ಡಾ.ಬಾಳಪ್ಪ ಹೆಸರು; ಅಭಿವೃದ್ಧಿಗೆ ನೆರವು: ಶಾಸಕ ರಾಜೇಶ್ ನಾಯ್ಕ್ (more…)