ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ವೈಭವದ ಬ್ರಹ್ಮರಥೋತ್ಸವ ನಡೆಯಿತು.
೨೦೨ನೇ ವರ್ಷದ ಬ್ರಹ್ಮರಥೋತ್ಸವ ಹಿನ್ನೆಲೆ ಕಳೆದ ವಾರದಿಂದಲೇ ಕಾರ್ಯಕ್ರಮಗಳು ಆರಂಭಗೊಂಡಿದ್ದವು. ಸೋಮವಾರ ಶ್ರೀ ದೇವರ ಮೂಲ ಪ್ರತಿಷ್ಠಾ ವರ್ದಂತಿ, ಪಟ್ಟದ ದೇವರಿಗೆ ಸ್ವರ್ಣ ಪೀಠ ಸಮರ್ಪಣೆ ಕಾರ್ಯಕ್ರಮ, ಬೆಳ್ಳಿ ಪಾಲ್ಕಿ ಹಗಲೋತ್ಸವ,ಜಲ ಕ್ರೀಡೆ, ಗೋಪುರೋತ್ಸವ, ಬೆಳ್ಳಿ ಲಾಲ್ಕಿ ಉತ್ಸವ, ಬೆಳ್ಳಿ ರಥೋತ್ಸವ ನಡೆಯಿತು.
ಮಂಗಳವಾರ ಬ್ರಹ್ಮ ರಥೋತ್ಸವ ನಡೆಯಿತು. ಈ ವೇಳೆ ಸಹಸ್ರಾರು ಭಕ್ತರಿಂದ ಮಲ್ಲಿಗೆ ಹೂವು ಹರಕೆ ಅರ್ಪಣೆ ನಡೆಯಿತು
ಬಂಟ್ವಾಳ: ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ ಬಿ.ಸಿ.ರೋಡಿನ ಡಾ.…