ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸತಾಗಿ ರಚನೆ ಆಗುವ ಟೋಲ್ ಗೇಟ್ ಗಳ ವಿರುದ್ಧ ಹಾಗೂ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಸಮಿತಿಯೊಂದು ಅಸ್ತಿತ್ವಕ್ಕೆ ಬಂದಿದೆ.
ಕಾಂಗ್ರೆಸ್, ಎಸ್ಡಿಪಿಐ ,ಜೆಡಿಎಸ್ ಪಕ್ಷಗಳ ಮುಖಂಡರು ಮತ್ತು ಹಲವು ಸಂಘಟನೆಗಳ ಮುಖಂಡರುಗಳು ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ಸಭೆ ಸೇರಿ ಸಮಿತಿ ರಚಿಸಿದ್ದಾರೆ. ಬ್ರಹ್ಮರಕೊಟ್ಲು ಟೋಲ್ ಪ್ಲಾಜಾ ಕಳೆದ 13 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳ ವಿರುದ್ಧವಾಗಿ ಟೋಲ್ ಸಂಗ್ರಹಿಸುತ್ತಿರುವುದಾಗಿ ಆರೋಪಿಸಿರುವ ಸಮಿತಿ, ಟೋಲ್ ಅನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದೆ. ಸಮಿತಿ ಸಂಚಾಲಕರಾಗಿ ಸುಹೇಲ್ ಕಂದಕ್, ಅನ್ವರ್ ಸಾದತ್ ಬಜತ್ತೂರು ಹಾಗೂ ಎಂ ಎಸ್ ಮಹಮ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಸಮಿತಿ ಸದಸ್ಯರಾಗಿ ಹನೀಫ್ ಖಾನ್ ಕೊಡಾಜೆ, ಧನುರಾಜ್ ಪೂಜಾರಿ,ಅಶ್ರಫ್ ಕಲ್ಲೇಗ, ಲತೀಫ್ ಅರಫಾ, ಮೂನಿಶ್ ಅಲಿ, ಇಕ್ಬಾಲ್ ಐಎಮ್ಆರ್, ಶಾಹುಲ್ ಎಸ್ ಎಚ್, ಇಮ್ರಾನ್ ಪಿ ಜೆ, ನಾಸಿರ್, ವಿನಯ ಕುಮಾರ್, ಹಿಸ್ರರ್, ಸತ್ತಾರ್, ಸವಾಝ್ ಬಂಟ್ವಾಳ, ಶಾಕಿರ್ ಅವರನ್ನು ಸಭೆ ಆಯ್ಕೆ ಮಾಡಿತು. ಐಎಂಆರ್ ಇಕ್ಬಾಲ್ ಸ್ವಾಗತಿಸಿದರು. ಸವಾಲ್ ಬಂಟ್ವಾಳ ವಂದಿಸಿದರು.