ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ | ನಾನಾ ಸವಲತ್ತುಗಳ ವಿತರಣೆ, ವಿಚಾರಗೋಷ್ಠಿ

ವಂಶವಾಹಿ(ಜೀನ್)ಗಳ ಕುರಿತು ಸಂಶೋಧನೆಗಳು ಹಾಗೂ ಚಿಕಿತ್ಸಾ ವಿಧಾನಗಳು ಭಾರತದಲ್ಲೂ ಪ್ರಗತಿಯಲ್ಲಿದ್ದು, ಯಶಸ್ವಿಯಾಗಿ ಸಾಮಾನ್ಯ ವರ್ಗದ ಕೈಗೆಟಕುವಂಥ ಯೋಜನೆಗಳು ಜಾರಿಯಾದರೆ, ದಿವ್ಯಾಂಗರಿಗೆ ಅನುಕೂಲವಾಗುತ್ತದೆ ಎಂದು ಮಂಗಳೂರು ಪ್ರಸಾದ್ ನೇತ್ರಾಲಯದ ಎಂ.ಡಿ ಡಾ. ಕೃಷ್ಣಪ್ರಸಾದ ಕೂಡ್ಲು ಹೇಳಿದ್ದಾರೆ.

ಬಿ.ಸಿ.ರೋಡಿನ ರೋಟರಿ ಹಾಲ್ ನಲ್ಲಿ ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಶ್ರಯದಲ್ಲಿ ಭಾನುವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಿವ್ಯಾಂಗರು ವಿಶೇಷವಾದ ಶಕ್ತಿ ಪಡೆದವರಾಗಿದ್ದು, ಸೂಕ್ತ ನೆರವು ಅಗತ್ಯವಾಗಿದೆ. ಕಣ್ಣು ಸಹಿತ ಬೇರೆ ಬೇರೆ ನ್ಯೂನತೆಗಳನ್ನು ಸರಿಪಡಿಸಲು ಸಾಧ್ಯ ಎಂದ ಅವರು, ಸಕ್ಷಮದ ಶಿಫಾರಸಿನಲ್ಲಿ ಬಂದ ದಿವ್ಯಾಂಗರಿಗೆ ತಮ್ಮಲ್ಲಿ ಉಚಿತ ಚಿಕಿತ್ಸೆ ಹಾಗೂ ಫಿಸಿಯೋಥೆರಪಿಯನ್ನು ಉಚಿತವಾಗಿ ಒದಗಿಸುವುದಾಗಿ ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸಕ್ಷಮ ಜಿಲ್ಲಾ ಘಟಕ ಅಧ್ಯಕ್ಷ ರಾಜಶೇಖರ ಭಟ್ ಕಾಕುಂಜೆ ಮಾತನಾಡಿ, ವಿಶೇಷವಾಗಿ ಅಗತ್ಯವುಳ್ಳ ದಿವ್ಯಾಂಗರಿಗೆ ಬೇಕಾದ ಸಕಲ ನೆರವು ಒದಗಿಸಲು ಸಕ್ಷಮ ಸದಾ ಬದ್ಧವಾಗಿದೆ ಎಂದರು.

ಜಾಹೀರಾತು

 ಮುಖ್ಯ ಅತಿಥಿಗಳಾಗಿ ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ಮಾನವ ಸಂಪನ್ಮೂಲ ಅಧಿಕಾರಿ ಸಂತೋಷ್ ಪೈ ಮಾತನಾಡಿ, ತಮ್ಮ ಸಂಸ್ಥೆಯಿಂದ ನೆರವು ನೀಡುವುದಾಗಿ ಘೋಷಿಸಿದರು.

www.flylinkworld.com

ಸಕ್ಷಮ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಕೇಶವ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಸಕ್ಷಮ ಕಾರ್ಯಾಚರಣೆ ಕುರಿತು ವಿವರಿಸಿದರು.

ವಿಕಾಸಂ ಸೇವಾ ಫೌಂಡೇಶನ್ ಸಹಸಂಸ್ಥಾಪಕ ಗೋಪಾಲ್ ಗೋವಿಂದತೋಟ ಶುಭ ಹಾರೈಸಿದರು. ವಿಕಾಸಂ ಸಹಸಂಸ್ಥಾಪಕ ಧರ್ಮಪ್ರಸಾದ್ ರೈ, ವೈದ್ಯರು ಹಾಗೂ ಉಪನ್ಯಾಸಕ ಮತ್ತು ಆರೆಸ್ಸೆಸ್ ತಾಲೂಕು ಸಂಘಚಾಲಕ ಡಾ. ಬಾಲಕೃಷ್ಣ ಕುಮಾರ್ ಉಪಸ್ಥಿತರಿದ್ದರು. ಸಕ್ಷಮ ದ.ಕ.ಜಿಲ್ಲಾ ಘಟಕ ಕಾರ್ಯದರ್ಶಿ ಹರೀಶ್ ಪ್ರಭು ವರದಿ ವಾಚಿಸಿದರು.  

ವಿಶೇಷಚೇತನ ಸಾಧಕರಾದ ತಾಲೂಕು ಹಿರಿಯ ನಾಗರಿಕರ ಸಬಲೀಕರಣ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆ ಎಂ.ಆರ್.ಡಬ್ಲ್ಯು ಗಿರೀಶ್ ಕುಮಾರ್ ಎ ಮತ್ತು ಪುತ್ತೂರಿನ ಸಾಧಕಿ ನೇಹಾ ರೈ ಅವರನ್ನು ಸನ್ಮಾನಿಸಲಾಯಿತು., ನಿಮ್ಮ ಮಕ್ಕಳನ್ನು ದುರ್ಬಲರು ಅಂದುಕೊಳ್ಳಬೇಡಿ

ನಾನು ಈ ಮಟ್ಟಕ್ಕೆ ಬೆಳೆಯಲು ನನ್ನ ತಾಯಿ , ನಿಮ್ಮ ಮಕ್ಕಳನ್ನು ದುರ್ಬಲರು ಎಂದು ಅಂದುಕೊಳ್ಳಬೇಡಿ, ಅವರನ್ನು ಗಟ್ಟಿಗೊಳಿಸಿ, ಅವರನ್ನು ಬೆಂಬಲಿಸಿ, ಅವರಿಗೆ ಶಿಕ್ಷಣ ಕೊಡಿ, ಅವರ ಕೌಶಲ್ಯಗಳನ್ನು ಹೆಚ್ಚಿಸುವಂತೆ ಮಾಡಿ, ನೀವು ಬೆಂಬಲಿಸಿದರೆ, ನನ್ನ ಹಾಗೆ ಎಲ್ಲ ಮಕ್ಕಳು ಬೆಳೆಯಲು ಸಾಧ್ಯವಾಗುತ್ತದೆ ಎಂದು ಸನ್ಮಾನ ಸ್ವೀಕರಿಸಿದ ನೇಹಾ ರೈ ಹೇಳಿದರು. ಲೋಕಾಕ್ಷ ಜಾದೂ ಅವರಿಂದ ಜಾದೂ ಪ್ರದರ್ಶನ ನಡೆಯಿತು. ವಿಶೇಷಚೇತನ ವಿದ್ಯಾರ್ಥಿ ಕೌಶಿಕ್ ಆಚಾರ್ಯ ಅವರು ಕಾಲಿನಲ್ಲಿ ಭಗತ್ ಸಿಂಗ್ ಚಿತ್ರ ಬರೆದು ಗಮನ ಸೆಳೆದರು. ಅರ್ಹ ದಿವ್ಯಾಂಗರಿಗೆ ದಿವ್ಯಾಂಗ ಉಪಯೋಗಿ ಉಪಕರಣಗಳ ವಿತರಣೆ ನಡೆಯಲಿತು.

ಸಮಾಜ ಸ್ಪಂದಿಸುವಿಕೆ ಅಗತ್ಯ:

ಕಾರ್ಯಕ್ರಮದಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಹರೀಶ್ ಮಾಂಬಾಡಿ, ಪ್ರಸ್ತುತ ವ್ಯವಸ್ಥೆಯಲ್ಲಿ ದಿವ್ಯಾಂಗರು ಎದುರಿಸುವ ಸವಾಲುಗಳ ಕುರಿತು ವಿವರಿಸಿ, ಸಮಾಜದ ಕಾಳಜಿ ಸ್ಪಂದನೆ ಅಗತ್ಯವಾಗಿದ್ದು, ಸರಕಾರ ಹಾಗೂ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣ, ಉದ್ಯೋಗ ಮೀಸಲಾತಿಯನ್ನು ಒದಗಿಸಬೇಕು ಎಂದರು.

ದಿವ್ಯಾಂಗರ ಕುರಿತು ಆರಂಭಿಕ ಗುರುತಿಸುವಿಕೆ ಕುರಿತು ವಿಕಾಸಂ ಸಹಸಂಸ್ಥಾಪಕ ಗಣೇಶ್ ಭಟ್ ವಾರಣಾಸಿ ವಿಚಾರ ಮಂಡಿಸಿ ಸರಿಯಾದ ಸಮಯದಲ್ಲಿ ಗುರುತಿಸುವಿಕೆ ಅಗತ್ಯ ಎಂದರು. ನಿರಾಮಯ ಯೋಜನೆ, ಕಾನೂನು ಪೋಷಕತ್ವ, ಯುಡಿಐಡಿ ಕಾರ್ಡ್ ಕುರಿತು ಚೇತನ ಬಾಲವಿಕಾಸ ಕೇಂದ್ರದ ಗಣರಾಜ ಭಟ್ ವಿಚಾರ ಮಂಡಿಸಿದರು.ವಿಕಾಸಂ ಸಹಸಂಸ್ಥಾಪಕ ಗಣೇಶ್ ಭಟ್ ವಾರಣಾಸಿ ಸ್ವಾಗತಿಸಿದರು. ಸದಸ್ಯ ಮಂಜುನಾಥ್ ವಂದಿಸಿದರು. ಸುರೇಖಾ ಯಳವರ ಕಾರ್ಯಕ್ರಮ ನಿರ್ವಹಿಸಿದರು.ಸಮಾರೋಪ ಸಮಾರಂಭದಲ್ಲಿ ಭಾಸ್ಕರ ಹೊಸಮನೆ ವಂದಿಸಿದರು. ಸತೀಶ್ ರಾವ್ ಸಹಕರಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ | ನಾನಾ ಸವಲತ್ತುಗಳ ವಿತರಣೆ, ವಿಚಾರಗೋಷ್ಠಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*