ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಬಂಟ್ವಾಳದ ಸಾಂತ್ವನ ಕೇಂದ್ರ ಹಾಗೂ ತಾಲೂಕು ಸರಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಸ್ಯೆಗಳ ಕುರಿತು ಸಾರ್ವಜನಿಕರು ಹಾಗೂ ವೈದ್ಯಾಧಿಕಾರಿಗಳು ಮತ್ತು ಅಧಿಕಾರಿಗಳ ಜತೆ ಮಾಹಿತಿ ಪಡೆದುಕೊಂಡರು
ತಾಲೂಕು ಮಟ್ಟದ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಗೈನಕಾಲಜಿಸ್ಟ್ ಇಲ್ಲ ಸರಕಾರ ಇಷ್ಟೊಂದು ವ್ಯವಸ್ಥೆ, ಮೂಲಸೌಕರ್ಯಗಳನ್ನು ಮಾಡಿದ ಮೇಲೆ ತಜ್ಞ ವೈದ್ಯರೂ ಬೇಕು ಎಂದು ಈ ಸಂದರ್ಭ ಸುದ್ದಿಗಾರರಿಗೆ ತಿಳಿಸಿದ ಅವರು, ಔಷಧಗಳ ಸ್ಟಾಕ್ ಇದ್ದಾಗ ಹೊರಗೆ ಕಳುಹಿಸುವ ಕುರಿತು ದೂರುಗಳು ಬಂದದ್ದನ್ನು ಪರಿಶೀಲಿಸಿದ ವಿಚಾರವನ್ನು ತಿಳಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಎಸ್.ತಿಮ್ಮಯ್ಯ, ಖಾಸಗಿ ಮೆಡಿಕಲ್ ಕಾಲೇಜಿನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಆಸ್ಪತ್ರೆಯ ವೈದ್ಯರ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದರು.
ಮಧ್ಯಾಹ್ನ ಬಿ.ಸಿ.ರೋಡಿನಲ್ಲಿರುವ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಕಾರ್ಯಚಟುವಟಿಕೆಗಳ ಕುರಿತು ಸಿಬ್ಬಂದಿಗಳಾದ ವಿದ್ಯಾ ಮತ್ತು ಪ್ರಶಾಂತ್ ಅವರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಜನಶಿಕ್ಷಣ ಟ್ರಸ್ಟ್ ನ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರು ಮಹಿಳಾ ಸಬಲೀಕರಣದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಡಾ. ನಾಗಲಕ್ಷ್ಮೀ, ಸಾಂತ್ವನ ಕೇಂದ್ರವಿದೆ ಎಂಬುದು ತಾಲೂಕಿನ ಎಲ್ಲರಿಗೂ ಗೊತ್ತಾಗಬೇಕು, ಮಹಿಳೆಯರಿಗೆ ಇಲ್ಲಿನ ಸಂಖ್ಯೆಯ ಅರಿವಿರಬೇಕು. ಯಾವುದೇ ಸಮಸ್ಯೆ ಬಂದಾಗ ಸಾಂತ್ವನ ಹೇಳಲು ಸರಕಾರ ನಮ್ಮೊಂದಿಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಆಯೋಗದ ಅಧ್ಯಕ್ಷೆ ಬಂಟ್ವಾಳದ ಎರಡೂ ಕಡೆ ಭೇಟಿ ನೀಡಿದ ವೇಳೆ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಗ್ಯಾರಂಟಿ ಸಮಿತಿ ಸದಸ್ಯೆ ಐಡಾ ಸುರೇಶ್, ಸಿರಾಜ್ ಮದಕ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಶು ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಸ್ಮಾನ್, ತಾಲೂಕು ಅಧಿಕಾರಿ ಮಮ್ತಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ತಾಲೂಕು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ, ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ನ್ಯಾಯವಾದಿ ಶೈಲಜಾ ರಾಜೇಶ್, ಪ್ರಮುಖರಾದ ಅಬ್ಬಾಸ್ ಆಲಿ, ಜೋಸ್ಫಿನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
| ಟೋಲ್ ಮುಂಭಾಗ ಧರಣಿ ಕುಳಿತ ಸಮಾನ ಮನಸ್ಕ ಸಮನ್ವಯ ಸಮಿತಿ ಹಾಗೂ ಟೋಲ್ ವಿರೋಧಿ ಹೋರಾಟ ಸಮಿತಿ ಸದಸ್ಯರ…