ಪ್ರಮುಖ ಸುದ್ದಿಗಳು

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ

ಪದ್ಯಾಣ ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಏಕಾದಶ ಪುಣ್ಯ ನದಿಗಳ ತೀರ್ಥದ ಭವ್ಯ ಮೆರವಣಿಗೆ ಹಾಗೂ ಹೊರಕಾಣಿಕೆ ಸಮರ್ಪಣೆ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಉಪಸಮಿತಿಗಳನ್ನು ರಚಿಸಲಾಯಿತು. ಈ ಸಂದರ್ಭ ರಥದ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಸಂಯೋಜಕರಾಗಿ ಸಂತೋಷ್ ಕುಮಾರ್ ಕೈಕಾರ ಅವರನ್ನು ಆಯ್ಕೆ ಮಾಡಲಾಯಿತು. ಹೊರಕಾಣಿಕೆ ಸಮಿತಿ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಸಂಯೋಜಕರಾಗಿ ಅಜಿತ್ ರೈ ಹೊಸಮನೆ ಅವರನ್ನು ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ಸರ್ವ ಸಮಿತಿಗಳ ಅಧ್ಯಕ್ಷರಾಗಿ ಗೋಪಾಲಕೃಷ್ಣ ಹೇರಳೆಯವರನ್ನು ಆಯ್ಕೆ ಮಾಡಲಾಗಿದೆ.

ಸ್ವಾಗತ ಸಮಿತಿಯಲ್ಲಿ ಈಶ್ವರ ಭಟ್ ಪಂಜಿಗುಡ್ಡೆ, ಡಾ. ಪ್ರಸಾದ್ ಭಂಡಾರಿ, ರಾಧಕೃಷ್ಣ ಆಳ್ವ, ಆರ್.ಸಿ. ನಾರಾಯಣ, ಡಾ. ಕೃಷ್ಣ ಪ್ರಸನ್ನ, ನಿತೀಶ್ ಕುಮಾರ್ ಶಾಂತಿನಗರ, ಸೀತಾರಾಮ ರೈ, ಶಿವಕುಮಾರ್, ಪುರುಷೋತ್ತಮ ಮಂಗ್ಲಿಮನೆ ಹಾಗೂ ಹೊರಕಾಣಿಕೆ ಸಮಿತಿಯಲ್ಲಿ ರಾಜೇಶ್ ಪರ್ಪುಂಜ, ಮೋಹನದಾಸ ಕಾಣಿಯೂರು, ಮುರಳಿಕೃಷ್ಣ ಹಸಂತಡ್ಕ, ಅಭಿಜಿತ್ ಕೊಡಿಪ್ಪಾಡಿ, ಮನೀಷ್ ಬಿರುವ, ನಿತೇಶ್ ಕಲ್ಲೇಗ, ಹರೀಶ್ ವಿಶ್ವನಾಥ ಗೌಡ ಬನ್ನೂರು, ದಿನೇಶ್ ಪಂಜಿಗ, ಕಿರಣ್ ರೈ ಬಲ್ನಾಡು, ಮಣಿಕಂಠ ಪುತ್ತೂರು, ಮಹಾಬಲ ರೈ ಪಡ್ಯಂಬೈಲು, ನಾಗೇಂದ್ರ ಬಾಳಿಗ, ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಈಶ್ವರ ನಾಯ್ಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಾಹೀರಾತು

ಈ ವೇಳೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಕಾರ್ಯಾಧ್ಯಕ್ಷರಾದ ಶ್ಯಾಮ್ ಸುದರ್ಶನ್ ಹೊಸಮೂಲೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ, ಬ್ರಹ್ಮಕಲಶೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿಯಾದ ಶಿವಪ್ರಸಾದ್ ರೈ ಅನಿಯಾಲ ಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago