ಸುದ್ದಿಜಾಲ

ಪದ್ಯಾಣ ಬ್ರಹ್ಮಕಲಶೋತ್ಸವ‌ ಹಿನ್ನೆಲೆ ಏಕಾದಶ ಕಲಶ ತೀರ್ಥಗಳ ಹಸಿರುವಾಣಿ ಭವ್ಯ ಮೆರವಣಿಗೆ: ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಸಭೆ

ಶ್ರೀ ಕ್ಷೇತ್ರ ಪದ್ಯಾಣದಲ್ಲಿ ಮಾ.30ರಂದ ನಡೆಯುವ ಬ್ರಹ್ಮಕಲಶೋತ್ಸವ‌ದ ಹಿನ್ನೆಲೆಯಲ್ಲಿ, ಪದ್ಯಾಣಕ್ಕೆ ಏಕಾದಶ ಕಲಶ ತೀರ್ಥಗಳು‌ ಹಾಗೂ ಹಸಿರುವಾಣಿಯ ಭವ್ಯ ಮೆರವಣಿಗೆ ನಡೆಯಲಿದ್ದು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಸಭೆ ನಡೆಯಿತು.

ಉಪ್ಪಿನಂಗಡಿಯಲ್ಲಿ ರಥ ಚಾಲನಾ ಸಮಿತಿ ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರಾಗಿ ಉಪ್ಪಿನಂಗಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ನಾಯ್ಕ್, ಸಂಚಾಲಕರಾಗಿ ಸುದರ್ಶನ್ ಉಪ್ಪಿನಂಗಡಿ, ಸಂಯೋಜಕರಾಗಿ ಮಹೇಶ್ ಬಜತ್ತೂರು ಹಾಗೂ ಭಜನಾ ಸಂಕೀರ್ತನೆಗಳ ಸಂಯೋಜಕರಾಗಿ ಉಷಾ ಮುಳಿಯ, ಗೀತಾ ಯತೀಶ್ ಬಂಗೇರಾ, ಕಸ್ತೂರಿ ಶಾಂತಪ್ಪ ಹಿರೇಬಂಡಾಡಿ, ಲೋಕೇಶ್ ಬೆತ್ತೋಡಿ, ರಾಜಶೇಖರ್ ಹಾಗೂ ಕಲಶ ಸಂಯೋಜಕರಾಗಿ ರವಿ ಇಳಂತಿಲ, ಸುನಿಲ್ ದಡ್ಡು ಹಾಗೂ ವ್ಯವಸ್ಥಾ ಸಮಿತಿ ಸಂಯೋಜಕರಾಗಿ ಸುರೇಶ್ ಅತ್ರಮಜಲ್, ಕಿಶೋರ್ ಉಪ್ಪಿನಂಗಡಿ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಾರ್ಯಾಧ್ಯಕ್ಷ ಶ್ಯಾಮ ಸುದರ್ಶನ ಹೊಸಮೂಲೆ, ಪ್ರಮುಖರಾದ ನರಸಿಂಹ ಮಾಣಿ, ಜಯಂತ್ ಪುರೋಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

2 days ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

4 days ago